ಕರ್ನಾಟಕ

karnataka

ETV Bharat / state

ಹಾಸನ: ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಘೋಷಣೆ, ವೇದಿಕೆಯಿಂದ ಕೆಳಗಿಳಿದ ಗೃಹಮಂಡಳಿ ಅಧ್ಯಕ್ಷ

ಹಾಸನದಲ್ಲಿ ಗಣಪತಿ ನಿಮಜ್ಜನ ಅಂಗವಾಗಿ ಆರ್ಕೆಸ್ಟ್ರಾ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಆಗಮಿಸಿದ್ದ ಶಾಸಕ ಶಿವಲಿಂಗೇಗೌಡ ಭಾಷಣ ಮಾಡುತ್ತಿದ್ದಂತೆ ಘೋಷಣೆ ಕೂಗಿದ ಜನರು ವೇದಿಕೆ ಮೇಲಿಂದ ಕೆಳಗಿಳಿಯುವಂತೆ ಮಾಡಿದ್ದಾರೆ.

By ETV Bharat Karnataka Team

Published : 4 hours ago

ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಘೋಷಣೆ ಕೂಗಿ ಕೆಳಗಿಳಿಯುವಂತೆ ಮಾಡಿದ ಜನತೆ
ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಘೋಷಣೆ ಕೂಗಿ ಕೆಳಗಿಳಿಯುವಂತೆ ಮಾಡಿದ ಜನತೆ (ETV Bharat)

ಹಾಸನ (ಅರಸೀಕೆರೆ):ಆರ್ಕೆಸ್ಟ್ರಾ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಗೃಹಮಂಡಳಿ ಅಧ್ಯಕ್ಷ ಮತ್ತು ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಗ್ರಾಮಸ್ಥರು ಘೇರಾವ್​ ಹಾಕುವ ಮೂಲಕ ವೇದಿಕೆ ಮೇಲಿಂದ ಕೆಳಗಿಳಿಯುವಂತೆ ಮಾಡಿದ ಘಟನೆ ನಡೆದಿದೆ.

ಅರಸೀಕೆರೆಯ ಕೆಂಕೆರೆ ಗ್ರಾಮದಲ್ಲಿ ಭಾನುವಾರ ರಾತ್ರಿ ಗಣಪತಿ ನಿಮಜ್ಜನ ಅಂಗವಾಗಿ ಆರ್ಕೆಸ್ಟ್ರಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಬಂದಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಗ್ರಾಮಸ್ಥರು ತಿರುಗಿಬಿದ್ದಿದ್ದಾರೆ. ಅವರ ವಿರುದ್ಧ ಘೋಷಣೆ ಕೂಗುವ ಮೂಲಕ ಶಾಸಕರನ್ನು ನಿಂದಿಸಿದ್ದು, ವೇದಿಕೆ ಮೇಲಿಂದ ಶಾಸಕ ತೆರಳುವಂತೆ ಅಪಮಾನ ಮಾಡಿದ್ದಾರೆ.

ವೇದಿಕೆ ಮೇಲೆ ಭಾಷಣ ಆರಂಭಿಸುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು, ಕೆರೆಗೆ ನೀರು ತುಂಬಿಸುವ ಯೋಜನೆ ಏಕೆ ರದ್ದು ಮಾಡಿಸಿದ್ದೀರಿ ಎಂದು ಪ್ರಶ್ನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಶಾಸಕ ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದವಾಗಿದೆ. ಬಳಿಕ ಗ್ರಾಮಸ್ಥರು ಶಾಸಕರಿಗೆ ಘೇರಾವ್ ಹಾಕಿದರು.

ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಜನರ ಘೋಷಣೆ (ETV Bharat)

ಕುರುಬರ ಸಂಘದ ಉಪಾಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಕೇಶವಮೂರ್ತಿ, ಗ್ರಾಮಸ್ಥರು ಸಿಎಂ ಭೇಟಿಯಾಗಿ ಹೇಮಾವತಿ ನದಿಯಿಂದ ಕೆಂಕೆರೆ ಗ್ರಾಮದ ಕೆರೆ ತುಂಬಿಸುವ ಯೋಜನೆಗೆ ಅನುಮತಿ ಪಡೆದಿದ್ದರು. 22 ಕೋಟಿ ರೂ. ವೆಚ್ಚದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದರು. ಇದರಿಂದ ಕೆರಳಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ಯೋಜನೆಯನ್ನು ರದ್ದು ಮಾಡಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದೇ ವಿಚಾರಕ್ಕೆ ಶಾಸಕರ ಬೆಂಬಲಿಗರು ಹಾಗೂ ಗ್ರಾಮಸ್ಥರ ನಡುವೆ ತಳ್ಳಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಬಳಿಕ ಆರ್ಕೆಸ್ಟ್ರಾ ಕಾರ್ಯಕ್ರಮ ಅರ್ಧಕ್ಕೆ ನಿಂತಿತು.

ಇದನ್ನೂ ಓದಿ:ಸಿಎಂ ತೆರಳುತ್ತಿದ್ದ ಮಾರ್ಗದಲ್ಲಿ ಪ್ರತಿಭಟನೆ: ಬಳ್ಳಾರಿಯಲ್ಲಿ ಭೂ ಸಂತ್ರಸ್ತ ಹೋರಾಟಗಾರರು ಪೊಲೀಸ್​​ ವಶಕ್ಕೆ

ABOUT THE AUTHOR

...view details