ಕರ್ನಾಟಕ

karnataka

ETV Bharat / state

ಬೆಂಗಳೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಓರ್ವ ಆರೋಪಿ ಪೊಲೀಸ್​ ಬಲೆಗೆ - Woman Murder Case - WOMAN MURDER CASE

ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯನ್ನು ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

police-arrested-man-who-killed-woman-in-kodigehalli-at-bengaluru
ಬೆಂಗಳೂರು ಮಹಿಳೆ ಹತ್ಯೆ ಪ್ರಕರಣ: ಲೈಂಗಿಕ ಕ್ರಿಯೆಗೆ ಪೀಡಿಸಿದ್ದರಿಂದ ಇಸ್ಟಾಗ್ರಾಮ್​ ಸ್ನೇಹಿತನಿಂದಲೇ ಕೊಲೆ!

By ETV Bharat Karnataka Team

Published : Apr 23, 2024, 5:01 PM IST

Updated : Apr 23, 2024, 6:35 PM IST

ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿ ಪ್ರಸಾದ್

ಬೆಂಗಳೂರು:ಒಂಟಿ ಮಹಿಳೆಯನ್ನು ಹತ್ಯೆಗೈದು ಚಿನ್ನಾಭರಣ, ಮೊಬೈಲ್ ಫೋನ್​ ಹಾಗೂ ಕಾರಿನೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ಕೊಡಿಗೇಹಳ್ಳಿ ಠಾಣಾ ಪೊಲೀಸರು ಸೆರೆ ಹಿಡಿದಿದ್ದಾರೆ. ಬನಶಂಕರಿ ಮೂಲದ ನವೀನ್ ಗೌಡ (27) ಬಂಧಿತ ಆರೋಪಿ. ಏ.19ರಂದು ಕೊಡಿಗೇಹಳ್ಳಿಯ ಗಣೇಶ ನಗರದಲ್ಲಿ ನಡೆದಿದ್ದ ಶೋಭಾ (48) ಎಂಬವರನ್ನು ಆರೋಪಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದ.

ಈ ಕುರಿತು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿ ಪ್ರಸಾದ್ ಮಾತನಾಡಿ, "ಕೊಡಿಗೇಹಳ್ಳಿ ಪೊಲೀಸ್​ ಠಾಣೆಯಲ್ಲಿ ಶನಿವಾರ ಮಹಿಳೆ ಹತ್ಯೆ ಪ್ರಕರಣ ದಾಖಲಾಗಿತ್ತು. 48 ವಯಸ್ಸಿನ ಮಹಿಳೆ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಕಾರ್​ ಡ್ರೈವಿಂಗ್​ ಸ್ಕೂಲ್​ ನಡೆಸುತ್ತಿದ್ದರು. ಆ ಮಹಿಳೆಯ ಮೃತದೇಹ ಮನೆಯಲ್ಲೇ ಪತ್ತೆಯಾಗಿತ್ತು. ತಾಯಿ ಸಂಪರ್ಕಕ್ಕೆ ಸಿಗದ ಹಿನ್ನಲೆಯಲ್ಲಿ ಮಗಳು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯನ್ನು ಕತ್ತು ಹಿಸುಕಿ ಕೊಲೆಗೈದಿರುವ ಅಂಶ ಬೆಳಕಿಗೆ ಬಂದಿದೆ" ಎಂದು ಮಾಹಿತಿ ನೀಡಿದ್ದಾರೆ.

"ಆರೋಪಿಯು ಮೃತ ಮಹಿಳೆಗೆ ಇನ್‌ಸ್ಟಾಗ್ರಾಮ್​ ಮೂಲಕ ಪರಿಚಯವಾಗಿದ್ದ. ಇಬ್ಬರ ನಡುವೆ ಉತ್ತಮ ಸ್ನೇಹ ಸಂಬಂಧವಿತ್ತು. ಏ.19ರಂದು ರಾತ್ರಿ ಒಟ್ಟಿಗೆ ಊಟ ಮಾಡಲು ಭೇಟಿಯಾದ ಬಳಿಕ ಮನೆಯಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಕೋಪಗೊಂಡ ಆರೋಪಿ ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಪೊಲೀಸರ ಕೈಗೆ ಸಿಗಬಾರದು ಎಂದು ಮೊಬೈಲ್ ಫೋನ್​ ಹಾಗೂ ಕಾರು ತೆಗೆದುಕೊಂಡು ಪರಾರಿಯಾಗಿದ್ದ. ಬಳಿಕ ಆರೋಪಿ ಫೋನ್​ ಹಿಂದೆ ಸಿಕ್ಕ ಎಟಿಎಂ ಕಾರ್ಡ್‌ನಿಂದ ಹಣ ಡ್ರಾ ಮಾಡಿದ್ದಾನೆ. ಈ ಮಾಹಿತಿ ಬೆನ್ನತ್ತಿ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಈತನನ್ನು ಬಿಟ್ಟು ಬೇರೆ ಯಾರಾದರೂ ಭಾಗಿಯಾಗಿದ್ದಾರಾ ಎಂಬುದರ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ" ಎಂದು ಡಿಸಿಪಿ ತಿಳಿಸಿದರು.

ಇದನ್ನೂ ಓದಿ:ಬೆಂಗಳೂರು: ಮಹಿಳೆಯ ಕೊಂದು ಚಿನ್ನ, ಫೋನ್​, ಕಾರು ದೋಚಿ ಹಂತಕರು ಪರಾರಿ - WOMAN MURDER

Last Updated : Apr 23, 2024, 6:35 PM IST

ABOUT THE AUTHOR

...view details