ಕರ್ನಾಟಕ

karnataka

ETV Bharat / state

ಬೆಂಗಳೂರು: ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ, ಖಡಕ್ ಎಚ್ಚರಿಕೆ - POLICE RAID - POLICE RAID

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ರೌಡಿಗಳ ಮನೆ ದಾಳಿ, ಖಡಕ್ ವಾರ್ನ್ ಮಾಡಿದ ದಕ್ಷಿಣ ವಿಭಾಗದ ಪೊಲೀಸರು
ರೌಡಿಗಳ ಮನೆ ದಾಳಿ, ಖಡಕ್ ವಾರ್ನ್ ಮಾಡಿದ ದಕ್ಷಿಣ ವಿಭಾಗದ ಪೊಲೀಸರು

By ETV Bharat Karnataka Team

Published : Mar 21, 2024, 12:49 PM IST

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಿಗ್ಗೆ ದಕ್ಷಿಣ ವಿಭಾಗದ ಪೊಲೀಸರು ರೌಡಿಗಳ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಸುಮಾರು 230 ಮಂದಿ ರೌಡಿಗಳ ಮನೆ ಮೇಲೆ ದಾಳಿ ನಡೆದಿದೆ.

ರೌಡಿಗಳ ಮನೆ ದಾಳಿ ಪೊಲೀಸ್​ ದಾಳಿ

ಜಯನಗರ, ಬನಶಂಕರಿ, ಚೆನ್ನಮ್ಮನ ಅಚ್ಚುಕಟ್ಟು, ಕುಮಾರಸ್ವಾಮಿ ಲೇಔಟ್ ಸೇರಿದಂತೆ ದಕ್ಷಿಣ ವಲಯದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳ ರೌಡಿಶೀಟರ್ ಮ‌ನೆಗಳನ್ನು ಪೊಲೀಸರು ಜಾಲಾಡಿದ್ದಾರೆ. ಪರಿಶೀಲನೆಯ ವೇಳೆ ಕೆಲವು ರೌಡಿಗಳ ಮನೆಗಳಲ್ಲಿ ಮಾರಕಾಸ್ತ್ರಗಳು, ವಿವಿಧ ಆಯುಧಗಳು ಸಿಕ್ಕಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ರೌಡಿಗಳ ಮನೆ ದಾಳಿ ಪೊಲೀಸ್​ ದಾಳಿ

ಕಾನೂನು ಸುವ್ಯವಸ್ಥೆ ಕಾಪಾಡುವ‌ ನಿಟ್ಟಿನಲ್ಲಿ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಪದೇ ಪದೇ ದುಷ್ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸರಿಂದ ಈ ಕಾರ್ಯಾಚರಣೆ ನಡೆದಿದೆ.

ರೌಡಿಗಳ ಮನೆ ದಾಳಿ ಪೊಲೀಸ್​ ದಾಳಿ

ಇದನ್ನೂ ಓದಿ:ಮಂಗಳೂರು: ಗೂಂಡಾ ಕಾಯ್ದೆಯಡಿ ಮೂವರು ರೌಡಿಶೀಟರ್​ಗಳ ಬಂಧನ

ABOUT THE AUTHOR

...view details