ಕರ್ನಾಟಕ

karnataka

ETV Bharat / state

ಬಿಜೆಪಿ‌ ಮುಖಂಡ ದೇವರಾಜೇಗೌಡ ವಿರುದ್ಧ ಎಸ್ಐಟಿಗೆ ದೂರು - Prajwal Revanna Sexual Assault Case - PRAJWAL REVANNA SEXUAL ASSAULT CASE

ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಕರ್ನಾಟಕ ಪಿಂಜಾರ ಜನಾಂಗ ಕ್ಷೇಮಾಭಿವೃದ್ಧಿ ಸಂಘಟನೆ ಎಸ್ಐಟಿಗೆ ದೂರು ನೀಡಿದೆ.

COMPLAINT TO SIT  ADVOCATE DEVARAJEGOWDA  BENGALURU
ಬಷೀರ್ ಅಹಮದ್ ಮತ್ತು ಬ್ರಹ್ಮಾನಂದ ರೆಡ್ಡಿ ಹೇಳಿಕೆ (ETV Bharat)

By ETV Bharat Karnataka Team

Published : May 8, 2024, 2:20 PM IST

ಬಷೀರ್ ಅಹಮದ್ ಮತ್ತು ಬ್ರಹ್ಮಾನಂದ ರೆಡ್ಡಿ ಹೇಳಿಕೆ (ETV Bharat)

ಬೆಂಗಳೂರು:ವಕೀಲ ಹಾಗೂ ಬಿಜೆಪಿ‌ ಮುಖಂಡ ದೇವರಾಜೇಗೌಡ ವಿರುದ್ಧ ಎಫ್ಐಆರ್‌ ದಾಖಲಿಸಬೇಕೆಂದು ಆಗ್ರಹಿಸಿ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಕರ್ನಾಟಕ ಪಿಂಜಾರ ಜನಾಂಗ ಕ್ಷೇಮಾಭಿವೃದ್ಧಿ ಸಂಘಟನೆ ದೂರು ಸಲ್ಲಿಸಿದೆ.

ಕಳೆದ ಎರಡು ವರ್ಷಗಳಿಂದ ಪೆನ್​ಡ್ರೈವ್ ಇದೆ ಎಂದು ಹೇಳಿಕೊಂಡಿರುವ ದೇವರಾಜೇಗೌಡ ಪೊಲೀಸರಿಗೆ ಯಾಕೆ ದೂರು ನೀಡಿರಲಿಲ್ಲ?. ಒಂದು ವೇಳೆ ದೂರು ನೀಡಿದ್ದರೆ ಸಂತ್ರಸ್ತೆಯರ ಮಾನ-ಮಾರ್ಯಾದೆ ಉಳಿಯುತ್ತಿತ್ತು ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಬಷೀರ್ ಅಹಮದ್ ತಿಳಿಸಿದರು.

ಅಶ್ಲೀಲ ವಿಡಿಯೋಗಳನ್ನು ಮಿಕ್ಸಿಂಗ್ ಮಾಡಿಸಿ ಸಾವಿರಾರು ಪೆನ್​ಡ್ರೈವ್​ಗಳನ್ನು ಅನಾಮಧೇಯ ವ್ಯಕ್ತಿಗಳ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಹಂಚಿದ್ದಾರೆ. ಈ ಮೂಲಕ ಸಾರ್ವಜನಿಕರ ಯೋಗಕ್ಷೇಮವನ್ನು ಲೆಕ್ಕಿಸದೆ ಗಂಭೀರ ಅಕ್ಷಮ್ಯ ಅಪರಾಧ ಎಸಗಿದ್ದಾರೆ ಎಂಬ ಆಯಾಮದಲ್ಲಿ ದೇವರಾಜೇಗೌಡರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ವಿಚಾರಣೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಪ್ರಕರಣದಲ್ಲಿ ನಡೆದಿರುವ ಹಾಗೂ ನಡೆಯುತ್ತಿರುವ ಎಲ್ಲ ಅಪರಾಧ ಚಟುವಟಿಕೆಗಳ ಬಗ್ಗೆ ಸಾಕ್ಷ್ಯಾಧಾರವಿದ್ದರೂ ಸಹ ದೇವರಾಜೇಗೌಡ ಕಾನೂನಿನ ವಿರುದ್ಧ ನಡೆದುಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ:ಮಂಗಳೂರು: ಕಾಲೇಜಿನ ಮಹಿಳೆಯರ ಶೌಚಗೃಹದಲ್ಲಿ ರಹಸ್ಯವಾಗಿ ಮೊಬೈಲ್ ಇಟ್ಟು ಚಿತ್ರೀಕರಣ; ಅಪ್ರಾಪ್ತ ವಶಕ್ಕೆ - Secret Filming In Washroom

ABOUT THE AUTHOR

...view details