ಕರ್ನಾಟಕ

karnataka

ETV Bharat / state

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್: ಎಸ್‌ಐಟಿ ಪ್ರಯತ್ನ ಹೇಗಿತ್ತು? ಇಲ್ಲಿಯವರೆಗಿನ ಬೆಳವಣಿಗೆಗಳು - Prajwal Revanna Case

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪ್ರಯತ್ನ ಹೇಗಿತ್ತು?. ಇಲ್ಲಿಯವರೆಗೆ ಬೆಳವಣಿಗೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

By ETV Bharat Karnataka Team

Published : May 31, 2024, 7:17 AM IST

PRAJWAL REVANNA  PRAJWAL REVANNA SEXUAL ASSAULT CASE  BENGALURU  SIT
ಪ್ರಜ್ವಲ್ ರೇವಣ್ಣ (ETV Bharat)

ಬೆಂಗಳೂರು:ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣದಲ್ಲಿ ಕೊನೆಗೂ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕಳೆದ ರಾತ್ರಿ ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿದೆ. ಗುರುವಾರ ಮಧ್ಯಾಹ್ನ 12 ಗಂಟೆಗೆ ಜರ್ಮನಿಯ ಮ್ಯೂನಿಚ್​​ನಿಂದ ಹೊರಟು ತಡರಾತ್ರಿ ಬೆಂಗಳೂರಿಗೆ ಬಂದಿಳಿದ ಆರೋಪಿಯನ್ನು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಇಮಿಗ್ರೇಷನ್ ಅಧಿಕಾರಿಗಳು ಮೊದಲು ವಶಕ್ಕೆ ಪಡೆದು, ಬಳಿಕ ಎಸ್ಐಟಿಗೆ ಒಪ್ಪಿಸಿದ್ದಾರೆ. ಈ ಮೂಲಕ 34 ದಿನಗಳ ಪ್ರಜ್ವಲ್ ರೇವಣ್ಣ ಕಣ್ಣಾಮುಚ್ಚಾಲೆ ಆಟಕ್ಕೆ ತೆರೆ ಬಿದ್ದಿದೆ. ಈ ಪ್ರಕರಣ ಇಲ್ಲಿಯವರೆಗೆ ನಡೆದು ಬಂದ ಕಾಲಾನುಕ್ರಮ ಹೀಗಿದೆ.

  • ಏಪ್ರಿಲ್ 21: ಹಾಸನದ ವಿವಿಧೆಡೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವೈರಲ್
  • ಏಪ್ರಿಲ್ 22: ಕೆಲವು ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳ ಮೂಲಕವೂ ವೈರಲ್.
  • ಏಪ್ರಿಲ್ 23: ವಿಡಿಯೋ ವೈರಲ್ ಮಾಡುವ ಮೂಲಕ ತೇಜೋವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ನವೀನ್ ಗೌಡ ಮತ್ತಿತರರ ವಿರುದ್ಧ ಹಾಸನದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು.
  • ಏಪ್ರಿಲ್ 26: ಬೆಳಿಗ್ಗೆ 9:30ಕ್ಕೆ ಪಡುವಲಹಿಪ್ಪೆಯ ಮತಕೇಂದ್ರದಲ್ಲಿ ಪ್ರಜ್ವಲ್ ರೇವಣ್ಣರಿಂದ ಮತ ಚಲಾವಣೆ.
  • ಏಪ್ರಿಲ್ 26: ಸಂಜೆ ಕೆ.ಆರ್.ನಗರದಲ್ಲಿ ಹತ್ತಿರದ ಸಂಬಂಧಿಯೊಬ್ಬರ ಸಾವಿನ ಹಿನ್ನೆಲೆಯಲ್ಲಿ ಹೋಗಿ ಅಲ್ಲಿಂದ ವಾಪಸಾಗಿದ್ದ ಪ್ರಜ್ವಲ್ ರೇವಣ್ಣ.
  • ಏಪ್ರಿಲ್ 26: ರಾತ್ರಿ ಹೊಳೆನರಸೀಪುರಿಂದ ಹೊರಟ ಪ್ರಜ್ವಲ್ ರೇವಣ್ಣ, ಬೆಂಗಳೂರಿಗೆ ಪ್ರಯಾಣ.
  • ಏಪ್ರಿಲ್ 27: ಬೆಳಗ್ಗಿನ ಜಾವ ಬೆಂಗಳೂರು ಅಂತಾರಾಷ್ಟ್ರಿಯ ವಿಮಾನ ನಿಲ್ದಾಣದಿಂದ ಜರ್ಮನಿಗೆ ಪ್ರಯಾಣ. ವಿಡಿಯೋ ವೈರಲ್ ಸಂಬಂಧ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ಪತ್ರ.
  • ಏಪ್ರಿಲ್ 27: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ, ಹಂಚಿಕೆ ವಿಚಾರವಾಗಿ ತನಿಖೆ ನಡೆಸುವಂತೆ ಎಸ್ಐಟಿ ರಚಿಸಿ ರಾಜ್ಯ ಸರ್ಕಾರದಿಂದ ಆದೇಶ. ಎಡಿಜಿಪಿ ಬಿ.ಕೆ.ಸಿಂಗ್ , ಎಸ್ಪಿಗಳಾದ ಸೀಮಾ ಲಾಟ್ಕರ್ ಮತ್ತು ಸುಮನ್ ಡಿ.ಪೆನ್ನೇಕರ್ ನೇತೃತ್ವದಲ್ಲಿ ಎಸ್ಐಟಿ ರಚನೆ.
  • ಏಪ್ರಿಲ್ 28: ಪ್ರಜ್ವಲ್ ರೇವಣ್ಣ ವಿರುದ್ದ ಹೊಳೆನರಸೀಪುರ ನಗರ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು.
  • ಏಪ್ರಿಲ್ 28: ಅಧಿಕೃತವಾಗಿ ಎಸ್ಐಟಿ ತನಿಖೆ ಆರಂಭ.
  • ಏಪ್ರಿಲ್ 29: ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್​ ರೇವಣ್ಣಗೆ ಎಸ್ಐಟಿ ನೋಟಿಸ್.
  • ಮೇ 1: ಸಂತ್ರಸ್ತೆಯೊಬ್ಬರ ಹೇಳಿಕೆ ಆಧರಿಸಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು.
  • ಮೇ 1: ವಿಚಾರಣೆಗೆ ಹಾಜರಾಗಲು 7 ದಿನ ಕಾಲಾವಕಾಶ ನೀಡುವಂತೆ ತಮ್ಮ ವಕೀಲರ ಮೂಲಕ ಪ್ರಜ್ವಲ್ ರೇವಣ್ಣ ಮನವಿ, ಎಕ್ಸ್ ಖಾತೆಯ ಮೂಲಕ ಮಾಹಿತಿ.
  • ಮೇ 1: ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಲು ಬಳಸಿದ್ದ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯರಿಂದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ.
  • ಮೇ 7: ಇಂಟರ್‌ಪೋಲ್ ಮೂಲಕ ಪ್ರಜ್ವಲ್ ರೇವಣ್ಣ ವಿರುದ್ದ ಬ್ಲ್ಯೂ ಕಾರ್ನರ್ ನೊಟೀಸ್ ಜಾರಿ.
  • ಮೇ 15: ಜರ್ಮನಿಯ ಮ್ಯೂನಿಚ್​ನಿಂದ ಭಾರತಕ್ಕೆ ಮರಳಲು ಪ್ರಜ್ವಲ್ ಬುಕ್ ಮಾಡಿದ್ದ ಟಿಕೆಟ್ ರದ್ದು.
  • ಮೇ 10: ಜರ್ಮನಿಯಿಂದ ಬೇರೆಡೆಗೆ ಪ್ರಜ್ವಲ್ ತೆರಳಿರುವ ಕುರಿತು ವದಂತಿ.
  • ಮೇ 20: ಎಲ್ಲಿದ್ದರೂ ಬಂದು ಧೈರ್ಯವಾಗಿ ತನಿಖೆ ಎದುರಿಸುವಂತೆ ಹೆಚ್‌.ಡಿ.ಕುಮಾರಸ್ವಾಮಿ ಮನವಿ.
  • ಮೇ 22: ಪ್ರಜ್ವಲ್ ರೇವಣ್ಣ ಪಾಸ್​ಪೋರ್ಟ್​ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯರಿಂದ ಕೇಂದ್ರಕ್ಕೆ ಪತ್ರ
  • ಮೇ 23: ಪ್ರಜ್ವಲ್ ರೇವಣ್ಣ ವಿರುದ್ಧ ಶೋಕಾಸ್ ನೋಟಿಸ್ ಜಾರಿಗೊಳಿಸಿದ ವಿದೇಶಾಂಗ ಸಚಿವಾಲಯ.
  • ಮೇ 23: ಶರಣಾಗುವಂತೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರಿಂದ ಬಹಿರಂಗ ಎಚ್ಚರಿಕೆ
  • ಮೇ 27: ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆಗೊಳಿಸಿದ ಪ್ರಜ್ವಲ್, ಮೇ 31ರಂದು ಎಸ್ಐಟಿ ತನಿಖಾಧಿಕಾರಿಗಳ ಮುಂದೆ ಹಾಜರಾಗುವುದಾಗಿ ಹೇಳಿಕೆ.
  • ಮೇ 29: ಹಾಸನ ನಗರದ ಆರ್.ಸಿ.ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಎಸ್‌ಐಟಿ ಹಾಗೂ ಎಫ್‌ಎಸ್‌ಎಲ್ ತಂಡದಿಂದ ಶೋಧ, ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು ಮತ್ತಿತರ ವಸ್ತುಗಳು ವಶಕ್ಕೆ.
  • ಮೇ 30: ಮಧ್ಯಾಹ್ನ ಜರ್ಮನಿಯ ಮ್ಯೂನಿಚ್​ನಿಂದ ಬೆಂಗಳೂರಿಗೆ ಪ್ರಜ್ವಲ್ ಪ್ರಯಾಣ.
  • ಮೇ 31: ಮಧ್ಯರಾತ್ರಿ 12:48ಕ್ಕೆ ಬೆಂಗಳೂರಿಗೆ ಬಂದಿಳಿದ ಪ್ರಜ್ವಲ್, ಎಸ್ಐಟಿಯಿಂದ ಬಂಧನ

ಎಸ್‌ಐಟಿ ಮುಂದಿನ ತನಿಖೆ ಹೇಗಿರಲಿದೆ?: ಇಂದಿನಿಂದ ಪ್ರಜ್ವಲ್‌ ರೇವಣ್ಣ ವಿಚಾರಣೆ ಆರಂಭಿಸಲಿರುವ ಎಸ್ಐಟಿ, ಈಗಾಗಲೇ ಅವರ ಮೊಬೈಲ್ ಫೋನ್ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದಿದೆ. ಮಧ್ಯಾಹ್ನದ ವೇಳೆಗೆ ವೈದ್ಯಕೀಯ ತಪಾಸಣೆ ನಡೆಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು, ಪೊಲೀಸ್‌ ಕಸ್ಟಡಿಗೆ ಕೇಳಲು ಸಿದ್ಧತೆ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ:ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್, ವಿಮಾನ ನಿಲ್ದಾಣದಲ್ಲಿ ಬಂಧಿಸಿದ SIT - SIT Arrests Prajwal Revanna

ABOUT THE AUTHOR

...view details