ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದ ಆರೋಪಿಗಳಾದ ಮಹಮ್ಮದ್ ಶಫಿ ನಾಶಿಪುಡಿ, ಇಲ್ತಾಜ್ ಮತ್ತು ಮುನಾವರ್ ಎಂಬವರನ್ನು ಪೊಲೀಸರು ತನಿಖೆಗೊಳಪಡಿಸಿದ್ದಾರೆ. ವಿಧಾನಸೌಧ ಠಾಣಾ ಇನ್ಸ್ಪೆಕ್ಟರ್ ಕುಮಾರಸ್ವಾಮಿ ಹಾಗೂ ಕಬ್ಬನ್ ಪಾರ್ಕ್ ಉಪ ವಿಭಾಗದ ಎಸಿಪಿ ಬಾಲಕೃಷ್ಣ ಅವರಿಂದ ಆರೋಪಿಗಳ ವಿಚಾರಣೆ ನಡೆಯುತ್ತಿದೆ.
ಆರೋಪಿಗಳ ಹಿಂದೆ ಯಾರಿದ್ದಾರೆ?, ಪಾಕ್ ಪರ ಘೋಷಣೆ ಕೂಗುವುದರ ಹಿಂದಿನ ಉದ್ದೇಶವೇನು?, ಆರೋಪಿತರು ಯಾವುದಾದರೂ ನಿಷೇಧಿತ ಸಂಘಟನೆಯ ಸದಸ್ಯರೇ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.