ಕರ್ನಾಟಕ

karnataka

By ETV Bharat Karnataka Team

Published : Mar 29, 2024, 8:35 AM IST

Updated : Mar 29, 2024, 10:44 AM IST

ETV Bharat / state

ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಸಲು ಬದ್ಧ: BWSSB ಅಧ್ಯಕ್ಷ - WATER SUPPLY TO IT BT COMPANIES

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಉದ್ಭವಿಸಿರುವ ಹಿನ್ನೆಲೆಯಲ್ಲಿ ಮಾತನಾಡಿದ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್, ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ ಎಂದು ಭರವಸೆ ಕೊಟ್ಟರು.

ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್
ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್

ಬೆಂಗಳೂರು: ನಗರದ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಮತ್ತು ಸಮರ್ಪಕವಾಗಿ ನೀರು ಪೂರೈಸಲು ಬದ್ಧವಾಗಿದ್ದೇವೆ ಎಂದು ಬೆಂಗಳೂರು ಜಲ ಮಂಡಳಿ‌ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.

ಔಟರ್ ರಿಂಗ್ ರೋಡ್ ಕಂಪನೀಸ್ ಅಸೊಸಿಯೇಶನ್ (ಆರ್ಕಾ) ಪದಾಧಿಕಾರಿಗಳೊಂದಿಗೆ ಗುರುವಾರ ವೇಬಿನಾರ್ ಮೂಲಕ ಸಭೆ ನಡೆಸಿ ಅವರು ಮಾತನಾಡಿದರು.

ಬೆಂಗಳೂರು ನಗರದಲ್ಲಿ ನೀರಿನ ಕೊರತೆಯನ್ನು ಸಮರ್ಥವಾಗಿ ನಿಭಾಯಿಸಲಾಗುತ್ತಿದೆ. ಅಂತೆಯೇ ಐಟಿ, ಬಿಟಿ ಕಂಪನಿಗಳಿಗೂ ಸಮರ್ಪಕವಾಗಿ ನೀರು ಪೂರೈಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಕಾವೇರಿ 5ನೇ ಹಂತ ಪೂರ್ಣಗೊಂಡರೆ ನಗರಕ್ಕೆ ಪ್ರತೀ ದಿನ ಹೆಚ್ಚುವರಿ 775 ಎಂ.ಎಲ್.ಡಿ ನೀರು ಸಿಗಲಿದೆ. ಇದರಿಂದ ನೀರಿನ ಕೊರತೆ ಕಡಿಮೆಯಾಗುತ್ತದೆ. ಅಂತರ್ಜಲ ಕುಸಿತದಿಂದ ಕುಡಿಯುವ ನೀರಿನಲ್ಲಿ ಕೊರತೆಯಾಗಿದೆ. ಈ ಹಂತದಲ್ಲಿ ಅನಾವಶ್ಯಕವಾಗಿ ನೀರು ಪೋಲಾಗದಂತೆ ನೋಡಿಕೊಳ್ಳಬೇಕು. ಅನಾವಶ್ಯಕವಾಗಿ ನೀರು ಪೋಲು ಮಾಡುವವರಿಗೆ ದಂಡ ವಿಧಿಸುವುದರಿಂದ ನೀರಿನ ಮೌಲ್ಯದ ಗೊತ್ತಾಗುತ್ತದೆ ಎಂದು ಅವರು ತಿಳಿಸಿದರು.

ಮಿತವಾಗಿ ನೀರು ಬಳಸುವಂತೆ ಕಂಪನಿಗಳು ನೌಕರರಲ್ಲಿ ಜಾಗೃತಿ ಮೂಡಿಸಬೇಕು. ನೀರಿನ ಸದ್ಭಳಕೆ ಹಾಗೂ ಸೂಕ್ತ ಬಳಕೆಗಾಗಿ ಜಲಮಂಡಳಿ ವತಿಯಿಂದ ಮೂರು ಸೂತ್ರಗಳ ಬಗ್ಗೆ ಪ್ರಚಾರ ಮಾಡಲಾಗುತ್ತಿದೆ. ನೀರು ಸಂರಕ್ಷಣೆ, ಸಂಸ್ಕರಿಸಿದ ನೀರು ಬಳಕೆ, ಮಳೆ ನೀರು ಸಂರಕ್ಷಣೆ ಮತ್ತು ಮರುಪೂರಣದ ಬಗ್ಗೆ ಜಾಗೃತಿ ಮೂಡಿಸಿ ಅಗತ್ಯವಿರುವ ಕಂಪನಿಗಳು ಹಾಗೂ ಸಂಸ್ಥೆಗಳಿಗೆ ಸಂಸ್ಕರಿಸಿದ ನೀರನ್ನು ಸರಬರಾಜು ಮಾಡಲು ಜಲಮಂಡಳಿ ಸಿದ್ಧವಿದೆ ಎಂದರು.

ಅಪಾರ್ಟ್‌ಮೆಂಟ್​ಗಳು, ವಾಣಿಜ್ಯ ಕಟ್ಟಡಗಳು, ಕೈಗಾರಿಕಾ ಪ್ರದೇಶಗಳು, ರೆಸ್ಟೋರೆಂಟ್​ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯವಾಗಿ ನೀರು ಪೋಲಾಗುವುದನ್ನು ತಡೆಯಲು ಏರಿಯೇಟರ್‌ ಹಾಗೂ ಫ್ಲೋ ಕಂಟ್ರೋಲರ್‌ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಮಂಡಳಿ ಕ್ರಮ ವಹಿಸುತ್ತಿದೆ. ಎಲ್ಲರೂ ಕೂಡ ಇದಕ್ಕೆ ಸಾಥ್ ನೀಡಬೇಕು ಎಂದು ಮನವಿ ಮಾಡಿದರು.

ನೀರಿನ ಸಮಸ್ಯೆಗೆ ಪಂಚ ಸೂತ್ರ ಸಿದ್ಧಗೊಳಿಸಿದ್ದು, ಕಂಪನಿಗಳು ಈ ಸೂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಗ್ರೀನ್ ಸ್ಟಾರ್ ಚಾಲೆಂಜ್​ಗೆ ಮುಂದಾಗಬೇಕು ಎಂದು ರಾಮ್​ ಪ್ರಸಾತ್​ ಮನೋಹರ್​ ಕರೆ ಕೊಟ್ಟರು.

ಇದನ್ನೂ ಓದಿ:ನೀರಿನ ಸಮಸ್ಯೆ; ಹೋಳಿ ಹಬ್ಬಕ್ಕೆ ಕಾವೇರಿ, ಬೋರ್‌ವೆಲ್‌ ನೀರು ಬಳಸಬೇಡಿ: ರಾಮ್‌ ಪ್ರಸಾತ್‌ ಮನೋಹರ್‌

Last Updated : Mar 29, 2024, 10:44 AM IST

ABOUT THE AUTHOR

...view details