ಕರ್ನಾಟಕ

karnataka

ರೇಣುಕಾಸ್ವಾಮಿ ಹತ್ಯೆ ಕೇಸ್: ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆಗೆ ಕಾನೂನು ತಜ್ಞರೊಂದಿಗೆ ಚರ್ಚೆ - Renukaswamy Murder Case

By ETV Bharat Karnataka Team

Published : Sep 10, 2024, 1:17 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್​ಶೀಟ್​ ಕೋರ್ಟ್‌ಗೆ ಸಲ್ಲಿಕೆಯಾಗಿದೆ. ಇದೀಗ ಪ್ರಕರಣದ ತ್ವರಿತ ವಿಚಾರಣೆ ಮುಗಿಸಿ, ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪೊಲೀಸ್​ ಇಲಾಖೆ ಚಿಂತನೆ ನಡೆಸಿದೆ.

Renukaswamy
ರೇಣುಕಾಸ್ವಾಮಿ (ETV Bharat)

ಪೊಲೀಸ್​ ಆಯುಕ್ತ ಬಿ.ದಯಾನಂದ್​ ಹೇಳಿಕೆ (ETV Bharat)

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ತ್ವರಿತಗತಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ‌ಮುಂದಾಗಿದ್ದಾರೆ. ಈ ಸಂಬಂಧ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ತ್ವರಿತ ನ್ಯಾಯಾಲಯ ಆಥವಾ ವಿಶೇಷ ನ್ಯಾಯಾಲಯಕ್ಕೆ ಪ್ರಕರಣವನ್ನು ಒಪ್ಪಿಸುವ ಕುರಿತಂತೆ ಚರ್ಚೆ ನಡೆಸುತ್ತಿದ್ದಾರೆ.

ಈ ಕುರಿತು ನಗರ ಪೊಲೀಸ್ ಆಯುಕ್ತ ದಯಾನಂದ ಮಾತನಾಡಿ, "ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ತ್ವರಿತ ನ್ಯಾಯಾಲಯ ಅಥವಾ ಸ್ಪೆಷಲ್ ಕೋರ್ಟ್​ಗೆ ಮನವಿ ಸಲ್ಲಿಸಲು ಚಿಂತನೆ ನಡೆಸಲಾಗುತ್ತಿದೆ. ಪ್ರಕರಣದ ಬಹುತೇಕ ವರದಿಗಳನ್ನು ಚಾರ್ಜ್‌ಶೀಟ್​ನಲ್ಲಿ ನಮೂದಿಸಲಾಗಿದೆ. ಸಿಎಫ್‌ಎಸ್​ಎಲ್​ನಿಂದ ಕೆಲವೇ ವರದಿಗಳು ಇನ್ನಷ್ಟೇ ಬರಬೇಕಿದ್ದು, ಬಳಿಕ ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ" ಎಂದು ತಿಳಿಸಿದರು.

"ಪರಪ್ಪನ ಅಗ್ರಹಾರದಲ್ಲಿ ದರ್ಶನ್​ಗೆ ರಾಜಾತಿಥ್ಯ ವಿಚಾರ ಸಂಬಂಧ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಸಿಸಿಬಿ ಜಂಟಿ ಪೊಲೀಸ್ ಡಾ.ಚಂದ್ರಗುಪ್ತ ನೇತೃತ್ವದಲ್ಲಿ, ಅಧಿಕಾರಿಗಳ ಪಾತ್ರ, ಜೈಲಿನಲ್ಲಿರುವ ಲೋಪದೋಷಗಳ ಕುರಿತಂತೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಸರ್ಕಾರ ನಿರ್ದೇಶಿಸಿದೆ. ತನಿಖೆ ಮುಕ್ತಾಯವಾದ ಬಳಿಕ ವರದಿ ನೀಡಲಾಗುವುದು" ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ಜೈಲಿನಲ್ಲಿ ಕೈದಿಗಳಿಗೆ ಮನೆಯೂಟ: ಮಾರ್ಗಸೂಚಿ ರಚಿಸುವುದಾಗಿ ತಿಳಿಸಿದ ಹೈಕೋರ್ಟ್ - Prisoners Home Food Guidelines

ABOUT THE AUTHOR

...view details