ಕರ್ನಾಟಕ

karnataka

By ETV Bharat Karnataka Team

Published : 5 hours ago

Updated : 3 hours ago

ETV Bharat / state

ರೇಣುಕಾಸ್ವಾಮಿ ಕೊಲೆ ಪ್ರಕರಣ: ತುಮಕೂರು ಜೈಲಿನಿಂದ ಮೂವರು ಆರೋಪಿಗಳು ಬಿಡುಗಡೆ - Three accused released

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದ ಮೂವರು ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

THREE ACCUSED RELEASED FROM TUMAKURU JAIL ON BAIL
ತುಮಕೂರು ಜೈಲಿನಿಂದ ಮೂವರು ಆರೋಪಿಗಳು ಬಿಡುಗಡೆ (ETV Bharat)

ತುಮಕೂರು:ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳು ಇಂದು ಜಾಮೀನಿನ ಮೇಲೆ ಬಿಡುಗಡೆಯಾದರು. 15ನೇ ಆರೋಪಿ ಕಾರ್ತಿಕ್, 16ನೇ ಆರೋಪಿ ಕೇಶವಮೂರ್ತಿ ಮತ್ತು 17ನೇ ಆರೋಪಿ ನಿಖಿಲ್ ಬಿಡುಗಡೆಯಾಗಿದ್ದಾರೆ.

ಜಾಮೀನು ಮಂಜೂರಾಗಿ 10 ದಿನಗಳ ಬಳಿಕ ಬಿಡುಗಡೆಯಾಗಿದ್ದಾರೆ. ಜಾಮೀನು ದೊರೆತರೂ ಕೂಡ ಜೈಲಿನಿಂದ ಹೊರಬರಲು ಕೆಲ ವಿಚಾರಗಳ ಹಿನ್ನೆಲೆಯಲ್ಲಿ ಅವರಿಗೆ ಹಿನ್ನಡೆ ಉಂಟಾಗಿತ್ತು.

ತುಮಕೂರು ಜೈಲಿನಿಂದ ಮೂವರು ಆರೋಪಿಗಳು ಬಿಡುಗಡೆ (ETV Bharat)

ಜೈಲಿನಿಂದ ಬಿಡುಗಡೆಯಾದ ಮೂವರು "ಪೊಲೀಸರಿಗೆ ನಾವು ಈಗಾಗಲೇ ಹೇಳಿಕೆಯನ್ನು ನೀಡಿದ್ದೇವೆ. ನ್ಯಾಯಾಲಯ ಎಲ್ಲವನ್ನೂ ನೋಡಿಕೊಳ್ಳುತ್ತದೆ. ಕಾನೂನು ಹೇಳಿದಂತೆ ನಾವು ಕೇಳುತ್ತೇವೆ" ಎಂದು ಹೇಳಿದರು. ಇದೇ ವೇಳೆ ಮಾಧ್ಯಮದವರ ಯಾವುದೇ ಪ್ರಶ್ನೆಗಳಿಗೂ ಉತ್ತರ ನೀಡಲು ನಿರಾಕರಿಸಿದರು.

ಇದನ್ನೂ ಓದಿ:ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ - Darshan Bail Plea Hearing

Last Updated : 3 hours ago

ABOUT THE AUTHOR

...view details