ಕರ್ನಾಟಕ

karnataka

ETV Bharat / state

ಫುಡ್ ಡೆಲಿವರಿ ಬಾಯ್​ ಅಟ್ಟಾಡಿಸಿ ಹೊಡೆದ ರೆಸ್ಟೋರೆಂಟ್ ಸಿಬ್ಬಂದಿ: ಬೆಂಗಳೂರಲ್ಲಿ ಪ್ರಕರಣ - FOOD DELIVERY BOY ATTACKED

ಆರ್ಡರ್ ಬೇಗನೆ ಕೊಡುವಂತೆ ಕೇಳಿದ ಫುಡ್ ಡೆಲಿವರಿ ಬಾಯ್ ಮೇಲೆ ರೆಸ್ಟೋರೆಂಟ್ ಸಿಬ್ಬಂದಿ ಹಲ್ಲೆ ಮಾಡಿದ ಆರೋಪ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಫುಡ್ ಡಿಲೆವರಿ ಬಾಯ್​ ಮೇಲೆ ಹಲ್ಲೆ
ಫುಡ್ ಡಿಲೆವರಿ ಬಾಯ್​ ಮೇಲೆ ಹಲ್ಲೆ (ETV Bharat)

By ETV Bharat Karnataka Team

Published : Feb 4, 2025, 10:42 AM IST

ಬೆಂಗಳೂರು: ಫುಡ್ ಡೆಲಿವರಿ ಬಾಯ್ ಮೇಲೆ ರೆಸ್ಟೋರೆಂಟ್ ಸಿಬ್ಬಂದಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಫೆಬ್ರವರಿ 2ರಂದು ರಾತ್ರಿ ಹೆಸರಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಯ ಎದುರಿನಲ್ಲಿರುವ ಗಬ್ರು ಬಿಸ್ಟ್ರೋ ಅಂಡ್​​ ಕೆಫೆಯಲ್ಲಿ ಘಟನೆ ನಡೆದಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಹಕರು ಆರ್ಡರ್ ಮಾಡಿದ್ದ ಫುಡ್ ನೀಡಲು ರೆಸ್ಟೋರೆಂಟ್ ಸಿಬ್ಬಂದಿ ವಿಳಂಬ ಮಾಡಿದ್ದಾರೆ. ಪದೇ ಪದೆ ಗ್ರಾಹಕರಿಂದ ಕರೆಗಳು ಬರುತ್ತಿದ್ದರಿಂದ ತನ್ನ ಕರ್ತವ್ಯದ ತುರ್ತು ಸ್ಥಿತಿಯನ್ನು ಅರ್ಥ ಮಾಡಿಕೊಂಡ ಡೆಲಿವರಿ ಬಾಯ್, 'ಸಮಯಕ್ಕೆ ಸರಿಯಾಗಿ ಫುಡ್ ಡೆಲಿವರಿ ಮಾಡಲು ಸಾಧ್ಯವಾಗುವಂತೆ ಬೇಗನೆ ಫುಡ್ ನೀಡುವಂತೆ' ರೆಸ್ಟೋರೆಂಟ್ ಸಿಬ್ಬಂದಿ ಬಳಿ ಕೇಳಿದ್ದಾನೆ. ಈ ವೇಳೆ ರೆಸ್ಟೋರೆಂಟ್ ಸಿಬ್ಬಂದಿ ಹಾಗೂ ಡಿಲೆವರಿ ಬಾಯ್ ನಡುವೆ ಮಾತಿಗೆ ಮಾತು ಬೆಳೆದಿದೆ. ನೋಡ ನೋಡುತ್ತಿದ್ದಂತೆ ಗ್ರಾಹಕರ ಕಣ್ಣೆದುರೇ ಫುಡ್ ಡೆಲಿವರಿ ಬಾಯ್ ಮೇಲೆ ಮುಗಿಬಿದ್ದ ನಾಲ್ಕೈದು ಜನ ರೆಸ್ಟೋರೆಂಟ್ ಸಿಬ್ಬಂದಿ, ಆತನನ್ನ ಅಟ್ಟಾಡಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರೆಸ್ಟೋರೆಂಟ್ ಸಿಬ್ಬಂದಿಯ ಹಿಂಸಾತ್ಮಕ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.

ವೈರಲ್ ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ಎಕ್ಸ್ ಬಳಕೆದಾರರೊಬ್ಬರು 'ನಾವು ವಾಸಿಸುವ ಕಾನೂನಿನನ ಚೌಕಟ್ಟಿನೊಳಗೆ ಇಂತಹ ಕ್ರೌರ್ಯಗಳಿಗೆ ಪರಿಣಾಮಗಳ ಭಯವಿಲ್ಲವೇ? ಪ್ರಾಮಾಣಿಕ ಜೀವನಕ್ಕಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ವ್ಯಕ್ತಿಗಳು ಇಂತಹ ಹಿಂಸಾಚಾರಕ್ಕೆ ಒಳಗಾದಾಗ, ಇದು ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಯ ಬಗ್ಗೆ ಹೇಳುತ್ತದೆ' ಎಂದು ಪೊಲೀಸರನ್ನು ಪ್ರಶ್ನಿಸಿದ್ದಾರೆ.

ಘಟನೆಯ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ದ್ವಿಚಕ್ರ ವಾಹನ ಟಚ್ ಆಗಿದ್ದಕ್ಕೆ ಯುವಕನ ಮೇಲೆ ಅಮಾನವೀಯವಾಗಿ ಹಲ್ಲೆ; ದೂರು ದಾಖಲು

ಇದನ್ನೂ ಓದಿ:ಹಳೇ ದ್ವೇಷಕ್ಕೆ ಯುವಕನ ಹತ್ಯೆ: ಕೊಲೆ ಆರೋಪಿಗಳ ಕಾಲಿಗೆ ಪೊಲೀಸ್ ಗುಂಡೇಟು

ABOUT THE AUTHOR

...view details