ಕರ್ನಾಟಕ

karnataka

ETV Bharat / state

ಭವಾನಿ ರೇವಣ್ಣ ಜಾಮೀನು ರದ್ದು ಕೋರಿದ ಎಸ್​ಐಟಿ; ಸುಪ್ರೀಂನಲ್ಲಿ ಸೋಮವಾರ ಅರ್ಜಿ ವಿಚಾರಣೆ

ಭವಾನಿ ರೇವಣ್ಣ ಅವರಿಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿರುವ ಅರ್ಜಿಯ ವಿಚಾರಣೆ ಸೋಮವಾರ ಸುಪ್ರೀಂ ಕೋರ್ಟ್​ನಲ್ಲಿ ನಡೆಯಲಿದೆ.

By IANS

Published : 5 hours ago

Updated : 4 hours ago

ಭವಾನಿ ರೇವಣ್ಣ
ಭವಾನಿ ರೇವಣ್ಣ (IANS)

ಬೆಂಗಳೂರು/ನವದೆಹಲಿ:ಅಶ್ಲೀಲ ವಿಡಿಯೋ ಹಗರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಎಸ್ಐಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.

ಸುಪ್ರೀಂ ಕೋರ್ಟ್​ನ ವೆಬ್​ಸೈಟ್​ನಲ್ಲಿ ಪ್ರಕಟವಾದ ವಿಚಾರಣಾ ಪಟ್ಟಿಯ ಪ್ರಕಾರ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ನ್ಯಾಯಪೀಠವು ಅಕ್ಟೋಬರ್ 14 ರಂದು ಈ ಪ್ರಕರಣದ ವಿಚಾರಣೆಯನ್ನು ಪುನಾರಂಭಿಸಲಿದೆ. ಇದಕ್ಕೂ ಮುನ್ನ ಜುಲೈನಲ್ಲಿ, ಕರ್ನಾಟಕ ಎಸ್ಐಟಿ ಸಲ್ಲಿಸಿದ ವಿಶೇಷ ರಿಟ್​ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿತ್ತು ಮತ್ತು ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಭವಾನಿ ರೇವಣ್ಣ ಅವರಿಗೆ ಸೂಚಿಸಿತ್ತು.

ಈ ವಿಷಯವು ಮಹಿಳೆಯೊಬ್ಬರ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ್ದು, ಅಪರಾಧ ನಡೆದಿದೆಯಾ ಎಂಬುದನ್ನು ವಿಚಾರಣೆಯ ಸಮಯದಲ್ಲಿ ನಿರ್ಧರಿಸಬೇಕಾಗುತ್ತದೆ ಎಂದು ಹೇಳಿದ ಸುಪ್ರೀಂ ಕೋರ್ಟ್​ ಪೀಠ, ಈ ವಿಷಯವನ್ನು ರಾಜಕೀಯಗೊಳಿಸುವ ಅಗತ್ಯವಿಲ್ಲ ಎಂದು ಎಚ್ಚರಿಸಿತ್ತು ಮತ್ತು ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ತಾಯಿಯ ಪಾತ್ರ ಏನೆಂದು ಪ್ರಶ್ನಿಸಿತ್ತು.

ಇದಕ್ಕೆ ರಾಜ್ಯ ಎಸ್ಐಟಿ ಪರ ಹಿರಿಯ ವಕೀಲ ಕಪಿಲ್ ಸಿಬಲ್, ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್​ಪಿಸಿ) ಸೆಕ್ಷನ್ 164 ರ ಅಡಿಯಲ್ಲಿ ಸಂತ್ರಸ್ತೆ ದಾಖಲಿಸಿದ ಹೇಳಿಕೆಯಲ್ಲಿ ಭವಾನಿ ರೇವಣ್ಣ ಅವರ ಪಾತ್ರವಿರುವುದು ದಾಖಲಾಗಿದೆ ಎಂದು ವಾದ ಮಂಡಿಸಿದ್ದರು.

ಇದನ್ನೂ ಓದಿ : ಸಂತ್ರಸ್ತೆಯ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್ - Bhavani Revanna

Last Updated : 4 hours ago

ABOUT THE AUTHOR

...view details