ಶಿವಮೊಗ್ಗ:ಇತ್ತೀಚೆಗೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದ ಗ್ಯಾಂಗ್ ವಾರ್ನಲ್ಲಿ ನಡೆದ ಮೂವರ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ, ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ. ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ. ಶಿವಮೊಗ್ಗ ತಾಲೂಕು ಬೀರನಕೆರೆ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ಶೋಯಬ್ ಅಲಿಯಾಸ್ ಅಂಡ ಎಂಬಾತನ ಕಾಲಿಗೆ ಗುಂಡು ಹೊಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಇವತ್ತು ಬೆಳಗಿನ ಜಾವ ಶೋಯಬ್ನ ಬಂಧನಕ್ಕೆ ಪಿಎಸ್ಐ ಕುಮಾರ್ ಮತ್ತು ಸಿಬ್ಬಂದಿ ಅಣ್ಣಪ್ಪ ಬೀರನಕೆರೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಮಾರಕಾಸ್ತ್ರದಿಂದ ಪೊಲೀಸ್ ಸಿಬ್ಬಂದಿ ಮೇಲೆ ಆರೋಪಿ ದಾಳಿಗೆ ಯತ್ನಿಸಿದ್ದ. ಆತ್ಮರಕ್ಷಣೆಗಾಗಿ ಪಿಎಸ್ಐ ಕುಮಾರ್ ಗುಂಡು ಹಾರಿಸಿ, ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.