ಕರ್ನಾಟಕ

karnataka

By ETV Bharat Karnataka Team

Published : 4 hours ago

ETV Bharat / state

ಶುದ್ಧ ನೀರಿಗಾಗಿ ಆಗ್ರಹಿಸಿ ತೆಪ್ಪದಲ್ಲಿ ಕೂತು ಉಪವಾಸ ಸತ್ಯಾಗ್ರಹ: ಗಾಂಧೀಜಿ ಮಾದರಿಯಲ್ಲೇ ಹೋರಾಟ - Struggle like Gandhiji

ಶುದ್ಧ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಗಾಂಧಿ ಹೋರಾಟದ ದಾರಿಯನ್ನೇ ತುಳಿದಿರುವ ಗ್ರಾಮಸ್ಥರು ಇಂದು ಸಹ ಉಪವಾಸ ಸತ್ಯಾಗ್ರಹ ನಡೆಸಿದರು. ಕೆರೆಯಲ್ಲಿ ತೆಪ್ಪದ ಮೇಲೆ ಕೂತ ಹೋರಾಟಗಾರರು ಮಳೆನೀರು ಕ್ಲೊಯು, ಶುದ್ಧ ನೀರು ಕೊಡುವಂತೆ ಆಗ್ರಹಿಸಿದರು.

strike to demand clean water  Struggle like Gandhiji
ಶುದ್ಧ ನೀರಿಗಾಗಿ ಆಗ್ರಹಿಸಿ ತೆಪ್ಪದಲ್ಲಿ ಕೂತು ಉಪವಾಸ ಸತ್ಯಾಗ್ರಹ! ಗಾಂಧೀಜಿ ಮಾದರಿಯಲ್ಲೇ ಹೋರಾಟ (ETV Bharat)

ದೊಡ್ಡಬಳ್ಳಾಪುರ:ಹೋರಾಟಕ್ಕಿರುವ ಶಕ್ತಿಯನ್ನ ಪ್ರಪಂಚಕ್ಕೆ ತೋರಿಸಿಕೊಟ್ಟವರು ಮಹಾತ್ಮ ಗಾಂಧಿ. ಇಂದು ಗಾಂಧಿಯವರ ಹುಟ್ಟಿದ ದಿನ. ವಿಶ್ವದಾದ್ಯಂತ ಗಾಂಧೀಜಿ ಜಯಂತಿ ಆಚರಿಸಲಾಗಿದೆ. ಶುದ್ಧ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಗಾಂಧಿ ಹೋರಾಟ ದಾರಿಯನ್ನೇ ತುಳಿದಿರುವ ಗ್ರಾಮಸ್ಥರು ಇಂದು ಸಹ ಉಪವಾಸ ಸತ್ಯಾಗ್ರಹ ನಡೆಸಿದರು. ಕೆರೆಯಲ್ಲಿ ತೆಪ್ಪದ ಮೇಲೆ ಕೂತ ಹೋರಾಟಗಾರರು ಮಳೆನೀರು ಕ್ಲೊಯು, ಶುದ್ಧ ನೀರು ಕೊಡುವಂತೆ ಆಗ್ರಹಿಸಿದರು.

ಅರ್ಕಾವತಿ ನದಿ ಪಾತ್ರದಲ್ಲಿ ಬರುವ ಕೆರೆಗಳು ವಿಷವಾಗಿವೆ. ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ತ್ಯಾಜ್ಯ ನೀರು ಮತ್ತು ದೊಡ್ಡಬಳ್ಳಾಪುರ ನಗರದ ಒಳಚರಂಡಿ ನೀರು ಕೆರೆಯ ಒಡಲು ಸೇರಿ ಕುಲುಷಿತಗೊಂಡಿದೆ. ಕೆರೆಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಂತರ್ಜಲ ನೀರು ವಿಷವಾಗಿದೆ. ಶುದ್ಧ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಸ್ಥರು ಕಳೆದ ಮೂರು ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಗ್ರಾಮಸ್ಥರ ಬೇಡಿಕೆಗಳು ಈಡೇರದ ಹಿನ್ನಲೆ ಗಾಂಧಿ ಜಯಂತಿ ದಿನವಾದ ಇಂದು ಗಾಂಧಿ ಹಾದಿಯಲ್ಲಿ ಹೋರಾಟ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದರು.

ದೊಡ್ಡತುಮಕೂರು ಕೆರೆಯ ಬಳಿ ಸೇರಿದ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಹೋರಾಟಗಾರರು ಉಪವಾಸ ಸತ್ಯಾಗ್ರಹವನ್ನು ನಡೆಸಿದರು. ಕೆರೆಯಲ್ಲಿ ತೆಪ್ಪಗಳ ಮೇಲೆ ಕುಳಿತ ಹೋರಾಟಗಾರರು, ''ಉಳಿಸಿ ಉಳಿಸಿ ಕೆರೆಗಳನ್ನು ಉಳಿಸಿ.. ಶುದ್ಧ ನೀರು ನಮ್ಮ ಹಕ್ಕು.. ಕೆರೆ ಇರುವುದು ಮಳೆ ನೀರು ಶೇಖರಣೆಗಾಗಿ'' ಎಂದು ಘೋಷಣೆಗಳನ್ನು ಕೂಗುವ ಮೂಲಕ ಸತ್ಯಾಗ್ರಹ ನಡೆಸಿದರು.

ಶುದ್ಧ ನೀರಿಗಾಗಿ ಆಗ್ರಹಿಸಿ ಹೋರಾಟ:ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಹೋರಾಟಗಾರರಾದ ವಸಂತ್, ''ಶುದ್ಧ ನೀರಿಗಾಗಿ ಆಗ್ರಹಿಸಿ ನಾವು ಕಳೆದ ಮೂರು ವರ್ಷಗಳಿಂದ ಗಾಂಧಿ ತತ್ವದ ಮೇಲೆ ಸಂವಿಧಾನ ಬದ್ಧವಾಗಿ ಶಾಂತಿಯುತ ಹೋರಾಟ ಮಾಡುತ್ತಿದ್ದೇವೆ. ಆದರೆ, ಅಧಿಕಾರಿಗಳು ನೀಡಿದ ಅಶ್ವಾಸನೆಗಳು ಕಾಗದಲ್ಲಿಯೇ ಉಳಿದಿದೆ. ಅರ್ಕಾವತಿ ನದಿ ಕಲುಷಿತವಾಗುವುದರಿಂದ ಸುಮಾರು ಒಂದು ಕೋಟಿಗೂ ಹೆಚ್ಚು ಜನರಿಗೆ ತೊಂದರೆಯಾಗುತ್ತಿದೆ. ಇದರ ಗಂಭೀರತೆ ಅಧಿಕಾರಿಗಳಿಗಿಲ್ಲ'' ಎಂದರು.

ಎರಡನೇ ಹಂತದ ಶುದ್ಧೀಕರಣ ಘಟಕ ಸ್ಫಾಪಿಸುವುದ್ದಾಗಿ ಭರವಸೆ ನೀಡಲಾಗಿತ್ತು. ಇಲ್ಲಿಯವರೆಗೂ STP ಘಟಕ ಕಾರ್ಯರೂಪಕ್ಕೆ ಬಂದಿಲ್ಲ. ಎರಡು ಗ್ರಾಮ ಪಂಚಾಯಿತಿಗಳ ಪ್ರತಿ ಮನೆಗೂ ಮಳೆನೀರು ಕ್ಲೊಯು ಪದ್ಧತಿ ಅಳವಡಿಸುವುದ್ದಾಗಿ ಹೇಳಿದರು, ಅನುದಾನವಿಲ್ಲ ಎಂದು ಮಳೆನೀರು ಕ್ಲೊಯು ಕೈ ಬಿಟ್ಟಿದ್ದಾರೆ. ನಮ್ಮ ಬೇಡಿಕೆ ಈಡೆರುವರೆಗೂ ನಾವು ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಡಿಸಿಗೆ ಮನವಿ:ಹೋರಾಟಗಾರರಾದ ಗಿರೀಶ್ ಮಾತನಾಡಿ, ಶುದ್ಧೀಕರಣ ಘಟಕ ಸ್ಫಾಪಿಸುವಂತೆ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೆ, ಇಲ್ಲಿಯವರೆಗೂ ಯಾವುದೇ ರೀತಿಯ ಕೆಲಸಗಳು ನಡೆದಿಲ್ಲ. ಬಾಶೆಟ್ಟಿಹಳ್ಳಿಯಲ್ಲಿ ಕೈಗಾರಿಕೆಗಳು ಸ್ಫಾಪನೆಯಾಗಿ 40 ವರ್ಷಗಳಾದರು ಮಾಲಿನ್ಯ ನಿಯಂತ್ರಣ ಕಚೇರಿ ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರವಾಗಿಲ್ಲ, ಇಲ್ಲಿನ ಕೈಗಾರಿಕೆಗಳ ಬಗ್ಗೆ ದೂರು ನೀಡಿದ್ದಾರೆ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ'' ಎಂದರು.

ಅರ್ಕಾವತಿ ನದಿ ಹೋರಾಟ ಸಮಿತಿಯ ಮುಖಂಡರಾದ ಸತೀಶ್ ಮಾತನಾಡಿ, ''ಕಳೆದ 10 ವರ್ಷಗಳಿಂದ ಶುದ್ಧ ನೀರಿಗಾಗಿ ಹೋರಾಟ ಮಾಡುತ್ತಿದ್ದರು. ಅಧಿಕಾರಿಗಳಿಂದ ಸೂಕ್ತ ಪ್ರತಿಫಲ ನಮಗೆ ಸಿಕ್ಕಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯತೆಯಿಂದ ನಮ್ಮ ಕೆರೆಗಳು ಕಲುಷಿತವಾಗಿವೆ. ವಿಷಕಾರಿ ನೀರು ಸೇವನೆಯಿಂದ ಗ್ರಾಮಸ್ಥರು ಅನಾರೋಗ್ಯದಿಂದ ಬಳಲುವಂತಾಗಿದೆ. ನಮ್ಮ ಬೇಡಿಕೆಗಳು ಈಡೆರದಿದ್ದಲ್ಲಿ ನಮ್ಮ ಹೋರಾಟದ ಕಾವು ಹೆಚ್ಚಾಗುವುದು'' ಎಂದರು. ಉಪವಾಸ ಸತ್ಯಾಗ್ರಹದಲ್ಲಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆಯ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.

ಇದನ್ನೂ ಓದಿ:ಮಹಾತ್ಮ ಗಾಂಧೀಜಿ ಜಯಂತಿ: 70ಕ್ಕೂ ಹೆಚ್ಚು ದೇಶಗಳಲ್ಲಿವೆ ಬಾಪು ಮೂರ್ತಿ, ವಿಶ್ವದಾದ್ಯಂತ ಸತ್ಯ ಅಹಿಂಸೆಯ ದೂತನಿಗೆ ವಿಶೇಷ ಗೌರವ - Gandhiji Statues all around World

ABOUT THE AUTHOR

...view details