ಕರ್ನಾಟಕ

karnataka

ETV Bharat / state

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಜನರು ನೀರು ಪಾಲಾಗಿರುವ ಶಂಕೆ; ಇಬ್ಬರ ಮೃತ ದೇಹ ಪತ್ತೆ - Boat Tragedy

ವಿಜಯಪುರ ಜಿಲ್ಲೆಯ ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಜನರು ನೀರು ಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನುಳಿದವರನ್ನು ಪತ್ತೆ ಮಾಡಲು ಶೋಧಕಾರ್ಯ ಮುಂದುವರೆದಿದೆ.

By ETV Bharat Karnataka Team

Published : Jul 2, 2024, 9:12 PM IST

Updated : Jul 2, 2024, 9:50 PM IST

Krishna river  Vijayapura  Boat Tragedy
ಸಾಂದರ್ಭಿಕ ಚಿತ್ರ (ETV Bharat)

ವಿಜಯಪುರ:ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಬಿದ್ದ ಪರಿಣಾಮ ಆರು ಜನರು ನೀರು ಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರ ಮೃತದೇಹ ಪತ್ತೆಯಾಗಿದೆ.

ಕೃಷ್ಣಾ ನದಿ ತಟದಲ್ಲಿ ಜನರು ಇಸ್ಪೀಟ್ ಆಟವಾಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಪೊಲೀಸರು ಬರುತ್ತಿದ್ದಾರೆಂಬ ಮಾಹಿತಿಯನ್ನು ಸ್ಥಳೀಯರು ಈ ಗುಂಪಿಗೆ ನೀಡಿದ್ದಾರೆ. ಪೊಲೀಸರು ಬರುತ್ತಾರೆಂಬ ಭಯದಿಂದ ನದಿಯ ನಡುಗಡ್ಡೆಯತ್ತ ತೆಪ್ಪದಲ್ಲಿ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ನದಿಯಲ್ಲಿ ತೆರಳುತ್ತಿರುವ ವೇಳೆ ಜೋರಾಗಿ ಗಾಳಿ ಬೀಸಿದ್ದರಿಂದ ತೆಪ್ಪ ಮುಗಿಚಿ ಬಿದ್ದಿದೆ. ಈ ಗುಂಪಿನಲ್ಲಿದ್ದ ಇಬ್ಬರು ಈಜಿ ದಡ ಸೇರಿದ್ದಾರೆ.

ಸ್ಥಳಕ್ಕೆ, ಎಸ್ಪಿ ಋಷಿಕೇಶ ಸೋನೆವಣೆ, ಎಎಸ್ಪಿ ಶಂಕರ ಮಾರಿಹಾರ, ಕೊಲ್ಹಾರ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಗ್ನಿಶಾಮಕ ಸಿಬ್ಬಂದಿ ಇಬ್ಬರ ಶವವನ್ನು ಹೊರ ತೆಗೆದಿದ್ದಾರೆ. ಇನ್ನುಳಿದ ನೀರು ಪಾಲಾಗಿವವರನ್ನು ಪತ್ತೆ ಮಾಡಲು ಶೋಧಕಾರ್ಯ ಮುಂದುವರೆದಿದೆ. ಈ ಕುರಿತು ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹಾಸನ: ಓವರ್ ಟೇಕ್ ವೇಳೆ ಭೀಕರ ಅಪಘಾತ, ಕಾರಿನಲ್ಲಿದ್ದ ಇಬ್ಬರು ದಾರುಣ ಸಾವು

Last Updated : Jul 2, 2024, 9:50 PM IST

ABOUT THE AUTHOR

...view details