ಕರ್ನಾಟಕ

karnataka

By ETV Bharat Karnataka Team

Published : Feb 17, 2024, 10:49 PM IST

ETV Bharat / state

ಹೃದಯಾಘಾತದಿಂದ ಕರ್ತವ್ಯ ನಿರತ ಯೋಧ ಸಾವು

ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತದಿಂದ ಮೈಸೂರಿನ ಯೋಧ ಸಾವನ್ನಪ್ಪಿರುವ ಘಟನೆ ಅಸ್ಸೋಂನಲ್ಲಿ ನಡೆದಿದೆ.

ಹೃದಯಾಘಾತದಿಂದ ಕರ್ತವ್ಯ ನಿರತ ಯೋಧ ಸಾವು
ಹೃದಯಾಘಾತದಿಂದ ಕರ್ತವ್ಯ ನಿರತ ಯೋಧ ಸಾವು

ಮೈಸೂರು: ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಅಸ್ಸೋಂ ರಾಜ್ಯದಲ್ಲಿ ಹುಲ್ಲಹಳ್ಳಿ ಗ್ರಾಮದ ಯೋಧ ನವೀನ್ ಶನಿವಾರ ಬೆಳಗ್ಗೆ 11 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ. ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ನಿವೃತ್ತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟರಾಮು ಎಂಬುವರ ಪುತ್ರ ವಿ.ನವೀನ್, ಸೈನ್ಯದಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಮೃತಪಟ್ಟಿರುವ ವಿಷಯ ತಿಳಿದು ಯೋಧ ನವೀನ್ ಅವರ ಸ್ನೇಹಿತರು ಮತ್ತು ಬಂಧು-ಬಳಗ ದುಃಖದಲ್ಲಿ ಮುಳುಗಿದ್ದಾರೆ.

ಯೋಧ ನವೀನ್ ಅವರ ಪಾರ್ಥಿವ ಶರೀರವನ್ನು ಭಾನುವಾರ ಮಧ್ಯಾಹ್ನ ನಂಜನಗೂಡಿಗೆ ತರಲಾಗುತ್ತಿದೆ. ನಂಜನಗೂಡಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಇದನ್ನೂ ಓದಿ:ಹಾವೇರಿ: ಬೋರ್​ವೆಲ್​ಗೆ ಲೈನ್ ಎಳೆಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಗುತ್ತಿಗೆ ಕಾರ್ಮಿಕ ಸಾವು, ಇನ್ನೋರ್ವನಿಗೆ ಗಾಯ

ABOUT THE AUTHOR

...view details