ಕರ್ನಾಟಕ

karnataka

ETV Bharat / state

ವಿಶೇಷ ವಿಮಾನದಲ್ಲಿ ಡಿಕೆಶಿ ಜೊತೆ ಮಂಗಳೂರಿಗೆ ಬಂದು ಹೋದ ಸೋಮಶೇಖರ್ - ಶತಮಾನೋತ್ಸವ ಕಾರ್ಯಕ್ರಮ

ಕರ್ಣಾಟಕ ಬ್ಯಾಂಕ್ ಕಾರ್ಯಕ್ರಮದ ಆಹ್ವಾನ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದೇ ಇದ್ದರೂ ಬಿಜೆಪಿ ಶಾಸಕ ಎಸ್​ ಟಿ ಸೋಮಶೇಖರ್​ ಅವರು ಡಿಕೆಶಿ ಜೊತೆಗೆ ವಿಶೇಷ ವಿಮಾನದಲ್ಲಿ ಆಗಮಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

Somashekhar came to Mangalore with DK Shivakumar on special flight
ವಿಶೇಷ ವಿಮಾನದಲ್ಲಿ ಡಿಕೆಶಿ ಜೊತೆ ಮಂಗಳೂರಿಗೆ ಬಂದು ಹೋದ ಸೋಮಶೇಖರ್

By ETV Bharat Karnataka Team

Published : Feb 19, 2024, 10:40 AM IST

ಮಂಗಳೂರು: ಕರ್ಣಾಟಕ ಬ್ಯಾಂಕ್​ನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಭಾನುವಾರ ಮಂಗಳೂರಿಗೆ ಆಗಮಿಸಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ವಿಶೇಷ ವಿಮಾನದಲ್ಲಿ ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್ ಜೊತೆಗೆ ಪ್ರಯಾಣಿಸಿರುವುದು ಚರ್ಚೆಗೆ ಕಾರಣವಾಗಿದೆ.

ಕರ್ಣಾಟಕ ಬ್ಯಾಂಕ್ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅತಿಥಿಯಾಗಿ ಆಗಮಿಸಿದ್ದರು. ಆದರೆ, ಬಿಜೆಪಿ ಶಾಸಕ ಎಸ್.ಟಿ‌. ಸೋಮಶೇಖರ್ ಅವರ ಹೆಸರು ಆಹ್ವಾನ ಪಟ್ಟಿಯಲ್ಲಿ ಇರಲಿಲ್ಲ. ಆದರೂ ಡಿ.ಕೆ. ಶಿವಕುಮಾರ್ ಅವರು ಆಗಮಿಸಿದ ವಿಶೇಷ ವಿಮಾನದಲ್ಲಿ ಒಟ್ಟಿಗೆ ಬಂದು, ಎಸ್.ಟಿ. ಸೋಮಶೇಖರ್ ಕರ್ಣಾಟಕ ಬ್ಯಾಂಕ್​ನ ಕಾರ್ಯಕ್ರಮದಲ್ಲಿ ಸಭಿಕರ ಸಾಲಿನಲ್ಲಿ ಕುಳಿತರು. ಕಾರ್ಯಕ್ರಮ ಮುಗಿದ ಬಳಿಕ ಮತ್ತೆ ಡಿಕೆಶಿ ಜೊತೆಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದರು.

ಎಸ್.ಟಿ‌.ಸೋಮಶೇಖರ್ ಬಿಜೆಪಿ ಶಾಸಕರಾಗಿದ್ದರೂ, ಕಾಂಗ್ರೆಸ್ ಜೊತೆಗೆ ಹಲವು ಬಾರಿ ಗುರುತಿಸಿಕೊಂಡಿದ್ದಾರೆ. ಬಿಜೆಪಿ ಜೊತೆಗೆ ವಿರಸ ಹೊಂದಿರುವ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು‌ ಹಲವು ಸಂದರ್ಭಗಳಲ್ಲಿ ಸುದ್ದಿಗಳು ಹರಿದಾಡುತ್ತಿತ್ತು. ಅವರು ಹಲವು ಬಾರಿ ಡಿಕೆಶಿ ಜೊತೆಗೆ ಕಾಣಿಸಿಕೊಂಡು‌ ಸುದ್ದಿಗೆ ಗ್ರಾಸವಾಗಿದ್ದರು. ಇದೀಗ ಮಂಗಳೂರಿನ ಕಾರ್ಯಕ್ರಮಕ್ಕೆ ಬಂದಿದ್ದ ಡಿಕೆಶಿ ಜೊತೆಗೆ ವಿಶೇಷ ವಿಮಾನದಲ್ಲಿ ಕಾಣಿಸಿಕೊಂಡು ಚರ್ಚೆಗೆ ಕಾರಣವಾಗಿದ್ದಾರೆ.

ಇದನ್ನೂ ಓದಿ:ಮರೆಯಾಗಿರುವ ನಮ್ಮ ಮಣ್ಣಿನ ಬ್ಯಾಂಕುಗಳನ್ನು ಕರ್ಣಾಟಕ ಬ್ಯಾಂಕ್ ವಿಲೀನ ಮಾಡಿಕೊಳ್ಳುವಂತಾಗಬೇಕು: ಡಿಕೆಶಿ

ABOUT THE AUTHOR

...view details