ಕರ್ನಾಟಕ

karnataka

ETV Bharat / state

ದೀಪಾವಳಿ ಹಬ್ಬ: NWKRTCಯಿಂದ 300 ವಿಶೇಷ ಬಸ್ ಸೇವೆ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 300 ವಿಶೇಷ ಬಸ್​ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

NWKRTC
NWKRTC ಬಸ್​ಗಳು (ETV Bharat)

By ETV Bharat Karnataka Team

Published : 4 hours ago

ಹುಬ್ಬಳ್ಳಿ:ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 300 ಹೆಚ್ಚುವರಿ ವಿಶೇಷ ಬಸ್​ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ಅಕ್ಟೋಬರ್​ 31ರಂದು ಗುರುವಾರ ನರಕ ಚತುರ್ದಶಿ, ನ.01ರಂದು ಕನ್ನಡ ರಾಜ್ಯೋತ್ಸವ, ನ.02ರಂದು ಬಲಿಪಾಡ್ಯಮಿ ಹಾಗೂ ನ.03ರಂದು ಭಾನುವಾರ ಇರುವುದರಿಂದ ಬೆಂಗಳೂರು ಮತ್ತು ಇತರ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲಿದ್ದಾರೆ. ಹೀಗಾಗಿ, ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ದೀಪಾವಳಿವರೆಗೆ ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ

ಬೆಂಗಳೂರಿನಿಂದ ರಾಜ್ಯ ಹಾಗೂ ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಅ.29ರಿಂದ ನ.01ರವರೆಗೆ ಹೆಚ್ಚುವರಿ ವಿಶೇಷ ಬಸ್​ಗಳ ಸೌಲಭ್ಯ ಇರಲಿದೆ. ಹಬ್ಬ ಮುಗಿದ ಬಳಿಕ ನ.03 ಹಾಗೂ ನ.04 ಹಾಗೂ ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.

ಇದನ್ನೂ ಓದಿ:ದೀಪಾವಳಿ ಹಬ್ಬ: ಏಕಮುಖ ವಿಶೇಷ ರೈಲು ಸಂಚಾರ, 14 ರೈಲುಗಳಿಗೆ ಹೆಚ್ಚುವರಿ ಬೋಗಿ ಜೋಡಣೆ

ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಮಾಡಿಕೊಳ್ಳುವುದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್​​​ಗಳಲ್ಲಿ ಪ್ರಯಾಣಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ದೀಪಾವಳಿ, ಛತ್ ಪೂಜೆ: ನೈಋತ್ಯ ರೈಲ್ವೆಯಿಂದ ಈ ಮಾರ್ಗಗಳಲ್ಲಿ ವಿಶೇಷ ರೈಲುಗಳ ಸಂಚಾರ

ABOUT THE AUTHOR

...view details