ಕರ್ನಾಟಕ

karnataka

ಡಿಕೆಶಿ ಭೇಟಿಯಾದ ಬಿಜೆಪಿ ರೆಬೆಲ್ ಶಾಸಕರಾದ ಎಸ್​ಟಿಎಸ್​, ಹೆಬ್ಬಾರ್ - ST Somashekar and Shivaram Hebbar

By ETV Bharat Karnataka Team

Published : Mar 21, 2024, 3:45 PM IST

ಬಿಜೆಪಿ ರೆಬೆಲ್ ಶಾಸಕರಾದ ಎಸ್​ಟಿ ಸೋಮಶೇಖರ್​ ಮತ್ತು ಶಿವರಾಂ ಹೆಬ್ಬಾರ್ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಕೆಲಕಾಲ ಚರ್ಚೆ ನಡೆಸಿದರು.

ಡಿಕೆಶಿಯನ್ನು ಭೇಟಿಯಾದ ಬಿಜೆಪಿ ರೆಬೆಲ್ ಶಾಸಕರಾದ ಎಸ್​ಟಿಎಸ್​, ಹೆಬ್ಬಾರ್
ಡಿಕೆಶಿಯನ್ನು ಭೇಟಿಯಾದ ಬಿಜೆಪಿ ರೆಬೆಲ್ ಶಾಸಕರಾದ ಎಸ್​ಟಿಎಸ್​, ಹೆಬ್ಬಾರ್

ಬೆಂಗಳೂರು: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿದೆ. ಬಿಜೆಪಿ ಇಬ್ಬರು ರೆಬೆಲ್ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.

ಎಸ್​ಟಿ ಸೋಮಶೇಖರ್​

ಗುರುವಾರ ಡಿಕೆ ಶಿವಕುಮಾರ್ ಮನೆಗೆ ಆಗಮಿಸಿದ ಬಿಜೆಪಿ ರೆಬೆಲ್ ಶಾಸಕರಾದ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಕೆಲ ಕಾಲ ಚರ್ಚೆ ಸಹ ನಡೆಸಿದ್ದಾರೆ. ಡಿಸಿಎಂ ಡಿಕೆಶಿ ಅವರ ಸದಾಶಿವನಗರ ನಿವಾಸಕ್ಕೆ ಇಬ್ಬರು ರೆಬೆಲ್ ಶಾಸಕರು ಒಂದೇ ಕಾರಿನಲ್ಲಿ ಆಗಮಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಎಸ್​​ ಟಿ ಸೋಮಶೇಖರ್ ಅವರು ಕಾಂಗ್ರೆಸ್ ಪರ ಅಡ್ಡ ಮತದಾನ ಮಾಡಿದ್ದರೆ, ಶಿವರಾಂ ಹೆಬ್ಬಾರ್ ಚುನಾವಣೆಗೆ ಗೈರಾಗಿದ್ದರು.

ಆತ್ಮ‌ ಸಾಕ್ಷಿಯಿಂದ ಮತ ಹಾಕಿದ್ದೇನೆ. ಯಾರಿಗೆ ತೋರಿಸಬೇಕು ಅವರಿಗೆ ತೋರಿಸಿ ಮತ ಚಲಾಯಿಸಿದ್ದೇನೆ ಎಂದು ಮತದಾನದ ಬಳಿಕ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದರೆ, ತಮ್ಮ ಆರೋಗ್ಯದಲ್ಲಿ ಏರುಪೇರು ಆಗಿತ್ತು, ವೈದ್ಯರ ಸಲಹೆ ಮೇರೆಗೆ ನಾನು ಮತದಾನಕ್ಕೆ ಹೋಗಲು ಸಾಧ್ಯವಾಗಲಿಲ್ಲ ಎಂದು ಶಿವರಾಂ ಹೆಬ್ಬಾರ್ ಸ್ಪಷ್ಟಪಡಿಸಿದ್ದರು.

ಶಿವರಾಂ ಹೆಬ್ಬಾರ್

ಈ ಹಿನ್ನೆಲೆ ಬಿಜೆಪಿ ಇಬ್ಬರು ಬಿಜೆಪಿ ರೆಬೆಲ್ ಶಾಸಕರಿಗೆ ಶೋಕಾಸ್ ನೋಟೀಸ್ ನೀಡಿತ್ತು. ಈಗಾಗಲೇ ಈ‌ ಇಬ್ಬರು ಶಾಸಕರು ಬಹುತೇಕ ಕಾಂಗ್ರೆಸ್​​ನತ್ತ ಮುಖ ಮಾಡಿದ್ದಾರೆ. ಆದರೆ, ಇನ್ನೂ ಬಿಜೆಪಿ ತೊರೆಯುವ ಬಗ್ಗೆ ತಮ್ಮ ನಿರ್ಧಾರ ಪ್ರಕಟಿಸಿಲ್ಲ. ಲೋಕಸಭಾ ಚುನಾವಣೆಯ ಬಳಿಕವಷ್ಟೇ ಇವರಿಬ್ಬರು ತಮ್ಮ ಮುಂದಿನ ರಾಜಕೀಯ ಹೆಜ್ಜೆ ಇಡುವ ಸಾಧ್ಯತೆ ಇದೆ. ಈ ನಡುವೆ ಇದೀಗ ಬಿಜೆಪಿಯಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಮಧ್ಯೆ ಇಬ್ಬರು ಶಾಸಕರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ‌.

ಬಿಜೆಪಿ ಶಾಸಕನಿಂದ ಅಡ್ಡಮತದಾನ?, ನಾನು ಆತ್ಮ ಸಾಕ್ಷಿಯಿಂದ ಮತ ಹಾಕಿದ್ದೇನೆ: ಎಸ್.ಟಿ.ಸೋಮಶೇಖರ್

ಅನಾರೋಗ್ಯದ ಕಾರಣದಿಂದ ರಾಜ್ಯಸಭೆ ಮತದಾನದಲ್ಲಿ ಭಾಗವಹಿಸಿಲ್ಲ: ಶಾಸಕ ಹೆಬ್ಬಾರ್

ABOUT THE AUTHOR

...view details