ಬೆಂಗಳೂರು:ವಿದ್ಯಾರ್ಥಿಯೊಬ್ಬ ತನ್ನ ಕಾಲೇಜಿನ ಸಿಬ್ಬಂದಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಸಿಂಧಿ ಕಾಲೇಜಿನಲ್ಲಿ ನಡೆದಿದೆ. ಅಸ್ಸೋಂ ಮೂಲದ ಜೈಕಿಶೋರ್ ರಾಯ್ (52) ಮೃತ ವ್ಯಕ್ತಿ. ಬಿಹಾರ ಮೂಲದ 22 ವರ್ಷದ ಆರೋಪಿ ಭಾರ್ಗವ್ ಎಂಬಾತನನ್ನು ಅಮೃತಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಎ. ವ್ಯಾಸಾಂಗ ಮಾಡುತ್ತಿದ್ದ ಭಾರ್ಗವ್, ಇಂದು ಮಧ್ಯಾಹ್ನ 3.30ರ ಸುಮಾರಿಗೆ ಪಾನಮತ್ತನಾಗಿ ಕಾಲೇಜು ಬಳಿ ಬಂದಿದ್ದ. ಕಾಲೇಜಿನಲ್ಲಿ ಕಾರ್ಯಕ್ರಮ ಸಹ ಇತ್ತು. ಪಾನಮತ್ತನಾಗಿದ್ದ ಭಾರ್ಗವ್ನನ್ನು ಕಾಲೇಜು ಆವರಣದೊಳಗೆ ಬಿಡಲು ಜೈಕಿಶೋರ್ ರಾಯ್ ನಿರಾಕರಿಸಿದ್ದರು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.