ಕರ್ನಾಟಕ

karnataka

ETV Bharat / state

'ಕಿಷ್ಕಿಂಧಾ' ಜಿಲ್ಲೆ ರಚನೆಗೆ ಆಗ್ರಹ; ಸರ್ಕಾರಕ್ಕೆ ಅಂಚೆ ಪತ್ರ ಬರೆದ 1,200 ವಿದ್ಯಾರ್ಥಿಗಳು - ಗಂಗಾವತಿ

ಕಿಷ್ಕಿಂಧಾ ಎಂಬ ನೂತನ ಜಿಲ್ಲೆ ರಚಿಸಬೇಕೆಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಪ್ಪಳದ ವಿದ್ಯಾರ್ಥಿಗಳು ಪತ್ರ ಬರೆದಿದ್ದಾರೆ.

Etv Bharat
Etv Bharat

By ETV Bharat Karnataka Team

Published : Feb 11, 2024, 12:12 PM IST

ಕೊಪ್ಪಳ:ಗಂಗಾವತಿಯನ್ನು ಕೇಂದ್ರ ಸ್ಥಾನವನ್ನಾಗಿಸಿಕೊಂಡು ಐತಿಹಾಸಿಕ ಕಿಷ್ಕಿಂಧಾ ಎಂಬ ನೂತನ ಜಿಲ್ಲೆ ರಚಿಸಬೇಕೆಂದು ಇಲ್ಲಿನ ಸಂಕಲ್ಪ ಪದವಿ ಮತ್ತು ಪದವಿಪೂರ್ವ ಕಾಲೇಜಿನ 1,200 ವಿದ್ಯಾರ್ಥಿಗಳು ಶನಿವಾರ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದರು.

ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಸ್ವ ಹಸ್ತಾಕ್ಷರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಿಗೆ ಪತ್ರಗಳನ್ನು ಬರೆದಿದ್ದಾರೆ. ಈ ಪತ್ರಗಳನ್ನು ಅಂಬೇಡ್ಕರ್ ವೃತ್ತದಲ್ಲಿರುವ ಪ್ರಧಾನ ಅಂಚೆ ಕಚೇರಿಯ ಆವರಣದಲ್ಲಿರುವ ಅಂಚೆ ಪೆಟ್ಟಿಗೆಯಲ್ಲಿ ಹಾಕಿದರು.

ಕಿಷ್ಕಿಂಧಾ ಜಿಲ್ಲೆಗಾಗಿ ಸರ್ಕಾರಕ್ಕೆ ಅಂಚೆ ಪತ್ರ ಬರೆದ ವಿದ್ಯಾರ್ಥಿಗಳು

ಕೇಂದ್ರ ಬಸ್ ನಿಲ್ದಾಣದ ಹಿಂದೆ ಇರುವ ವಿಜಯನಗರ ಕಾಲನಿಯ ಸಂಕಲ್ಪ ಕಾಲೇಜಿನ ಆವರಣದಿಂದ ಜಾಥಾ ನಡೆಸಿದ ವಿದ್ಯಾರ್ಥಿಗಳು ಶ್ರೀಕೃಷ್ಣದೇವರಾಯ ವೃತ್ತ, ನೀಲಕಂಠೇಶ್ವರ ವೃತ್ತದ ಮೂಲಕ ಪ್ರಧಾನ ಅಂಚೆ ಕಚೇರಿಗೆ ಬಂದು ಬಳಿಕ ಪತ್ರಗಳನ್ನು ಪೋಸ್ಟ್ ಮಾಡಿದರು. ಅಂಚೆ ಕಚೇರಿ ಸಿಬ್ಬಂದಿ ಪ್ಲಾಸ್ಟಿಕ್ ಚೀಲದಲ್ಲಿ ಪತ್ರಗಳನ್ನು ಹಾಕಿಸಿಕೊಂಡು ವಿಧಾನಸೌಧಕ್ಕೆ ತಲುಪಿಸುವ ಭರವಸೆ ನೀಡಿದರು.

ಗಂಗಾವತಿ ನೂತನ ಜಿಲ್ಲೆಯಾಗಬೇಕು. ಶೈಕ್ಷಣಿಕ, ಆರೋಗ್ಯ ಸೇವೆ ನಮ್ಮ ಹಕ್ಕು. ನಮ್ಮ ಜಿಲ್ಲೆ ನಮ್ಮ ಹಕ್ಕು. ಜಿಲ್ಲೆಯಲ್ಲಿ ಅತಿ ಹೆಚ್ಚು ತೆರಿಗೆ ಪಾವತಿದಾರರು ನಾವು. ಸರ್ಕಾರ ಈ ಬಗ್ಗೆ ಸ್ಪಂದಿಸಲೇಬೇಕು ಎಂಬ ಘೋಷಣೆಗಳನ್ನು ವಿದ್ಯಾರ್ಥಿಗಳು ಕೂಗಿದರು.

ಕಿಷ್ಕಿಂಧಾ ಜಿಲ್ಲೆಗಾಗಿ ಸರ್ಕಾರಕ್ಕೆ ಅಂಚೆ ಪತ್ರ ಬರೆದ ವಿದ್ಯಾರ್ಥಿಗಳು

ಕಾಲೇಜಿನ ಅಧ್ಯಕ್ಷ ನಾಗರಾಜ್ ಗುತ್ತೇದಾರ, ಪ್ರಾಂಶುಪಾಲ ಬಸಪ್ಪ ಸಿರಿಗೇರಿ, ಜಿಲ್ಲಾ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ಸಿಂಗನಾಳ ಸುರೇಶ, ಪ್ರಮುಖರಾದ ಮಂಜುನಾಥ ಕಟ್ಟಿಮನಿ, ಅನ್ನಪೂರ್ಣಸಿಂಗ್, ಉಗಮರಾಜ್ ಬಂಬ್, ಪವನಕುಮಾರ ಗುಂಡೂರು ಮಾತನಾಡಿದರು.

ಕಿಷ್ಕಿಂಧಾ ಜಿಲ್ಲೆಯ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಗಂಗಾವತಿ ಶಾಸಕ ಜಿ.ಜನಾರ್ದನ ರೆಡ್ಡಿ ಧ್ವನಿ ಎತ್ತಿದ್ದರು.

ಇದನ್ನೂ ಓದಿ:ಗಂಗಾವತಿ: ನೂತನ ಕಿಷ್ಕಿಂಧಾ ಜಿಲ್ಲೆಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯಗೆ ಮನವಿ

ABOUT THE AUTHOR

...view details