ಶಿವಮೊಗ್ಗ: ಆಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗದಿಂದ ಶಿಕಾರಿಪುರದ ಮೂಲಕ ಮಾಸೂರು ಗ್ರಾಮಕ್ಕೆ ತೆರಳುತ್ತಿದ್ದ ಆಂಬ್ಯುಲೆನ್ಸ್ಗೆ ಬೈಕ್ ಡಿಕ್ಕಿ ಹೊಡೆದಿದೆ.
ಬೈಕ್ ಸವಾರರನ್ನು ದಾವಣಗೆರೆ ಜಿಲ್ಲೆಯ ಹಳೇ ಜೋಗದ ನಿವಾಸಿಗಳಾದ ಪ್ರಸನ್ನ (34), ಕಾರ್ತಿಕ್ (24) ಹಾಗೂ ಅರುಣ್ ಕುಮಾರ್ (26) ಎಂದು ಗುರುತಿಸಲಾಗಿದೆ. ಮೃತರು ಶಿಕಾರಿಪುರದಿಂದ ಹಳೇ ಜೋಗಕ್ಕೆ ಬರುತ್ತಿದ್ದರು. ರಾತ್ರಿ 1 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ.