ಕರ್ನಾಟಕ

karnataka

ETV Bharat / state

ಕುಮಟಾದ ಬರ್ಗಿಯಲ್ಲಿ ಬಾಯ್ತೆರೆದ ಗುಡ್ಡ; ಮತ್ತೊಂದು ದುರಂತದ ಆತಂಕ! - earth fissure in Kumta - EARTH FISSURE IN KUMTA

ಕುಮಟಾದ ಬರ್ಗಿಯಲ್ಲಿ ಭೂಮಿ ಬಿರುಕು ಬಿಟ್ಟಿದ್ದು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಜತೆಗೆ ಅದೇ ಸ್ಥಳದಲ್ಲಿ ವಾಸಿಸುತ್ತಿರುವ ಗ್ರಾಮಸ್ಥರಿಗೆ ಮನೆಯಲ್ಲಿ ವಾಸ್ತವ್ಯ ಮಾಡದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

EARTH FISSURE IN KUMTA
ಕುಮಟಾದ ಬರ್ಗಿಯಲ್ಲಿ ಬಾಯ್ತೆರೆದ ಗುಡ್ಡ (ETV Bharat)

By ETV Bharat Karnataka Team

Published : Aug 25, 2024, 7:19 AM IST

Updated : Aug 25, 2024, 9:05 AM IST

ಕಾರವಾರ: ಜಿಲ್ಲೆಯಲ್ಲಿ ಇತ್ತೀಚಿಗೆ ಶಿರೂರಿನಲ್ಲಿ ಉಂಟಾದ ಭೀಕರ ಗುಡ್ಡ ಕುಸಿತ ಘಟನೆ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿತ್ತು. ಇದೀಗ ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ್​​ ವ್ಯಾಪ್ತಿಯ ಕುರಿಗದ್ದೆಯ ಜನವಸತಿ ಪ್ರದೇಶದ ಸಮೀಪದ ಗುಡ್ಡದಲ್ಲಿ ಭಾರೀ ಪ್ರಮಾಣದ ಬಿರುಕು ಕಾಣಿಸಿಕೊಂಡಿದ್ದು, ಇದು ಸ್ಥಳೀಯರ ನಿದ್ದೆಗೆಡಿಸಿದೆ.

ಕುರಿಗದ್ದೆ ಗ್ರಾಮದ ಕೃಷ್ಣಪ್ಪ ರಾಮಯ್ಯ ಪಟಗಾರ ಎಂಬುವರ ಮನೆ ಸಮೀಪದಲ್ಲಿರುವ ಅರಣ್ಯ ಪ್ರದೇಶದಲ್ಲಿ ಸುಮಾರು ಅರ್ಧ ಕಿಲೋಮೀಟರ್ ಆಗುವಷ್ಟು ಜಾಗದಲ್ಲಿ ಭಾರೀ ಪ್ರಮಾಣದಲ್ಲಿ ಭೂಮಿ ಬಾಯಿ ತೆರೆದುಕೊಂಡಿದೆ. ಅಲ್ಲಿನ ಪರಿಸ್ಥಿತಿಯನ್ನು ನೋಡಿದರೆ ಯಾವುದೇ ಕ್ಷಣದಲ್ಲಾದರು ಸಹ ಗುಡ್ಡ ಕುಸಿಯುವ ಸಾಧ್ಯತೆ ಹೆಚ್ಚಾಗಿದೆ.

ಶುಕ್ರವಾರ ರಾತ್ರಿಯಿಂದ ಮಳೆ ಸಹ ಜೋರಾಗಿದ್ದು ಗುಡ್ಡ ಕುಸಿಯುವ ಭಯ ಶುರುವಾಗಿದೆ. ಈಗಾಗಲೇ ಗುಡ್ಡ ಬಿರುಕು ಬಿಟ್ಟಿರುವ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಮನೆಯಲ್ಲಿ ವಾಸ್ತವ್ಯ ಮಾಡದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಕಣ್ಣೆದುರೇ ಬರುವ ಕರಾಳ ಶಿರೂರು ದುರಂತ:ಕಾರವಾರದಲ್ಲಿ ಎಂದೂ ಊಹಿಸಲಾಗದ ದುರಂತ ಈಗಾಗಲೇ ನಡೆದು ಹೋಗಿದೆ. ಜುಲೈ 16ರಂದು ಅಂಕೋಲ ತಾಲೂಕಿನ ಶಿರೂರು ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಜನ ನಾಪತ್ತೆಯಾಗಿ 8 ಜನರ ಮೃತದೇಹ ದೊರಕಿತ್ತು. ಪ್ರಕೃತಿಯ ರೌದ್ರಾವತಾರಕ್ಕೆ ಇನ್ನುಳಿದವರಿಗಾಗಿ ಶೋಧ ನಡೆಸಲು ಅಸಾಧ್ಯವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ನಾಪತ್ತೆಯಾದವರ ಹುಡುಕಾಟ ಮತ್ತು ರಕ್ಷಣಾ ಕಾರ್ಯಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದೆ.

ಈಗ ನಡೆದಿರುವ ಘಟನೆಯನ್ನೇ ಜನರಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಂಥ ವೇಳೆ ಮತ್ತೆ ಗುಡ್ಡದಲ್ಲಿ ಬಿರುಕು ಬಿಟ್ಟಿದ್ದು ಇದನ್ನು ಕಡೆಗಣಿಸದೆ ಮುಂಜಾಗ್ರತೆ ವಹಿಸಲು ಅಧಿಕಾರಿಗಳು ಜನರಿಗೆ ಸೂಚನೆ ನೀಡುತ್ತಿದ್ದಾರೆ.

ಇದನ್ನೂ ಓದಿ:ಚಾಮರಾಜನಗರ: ಕಾವೇರಿ ನದಿಯಲ್ಲಿ ಸಿಲುಕಿದ್ದ ಪ್ರವಾಸಿಗರು, ಅಂಬಿಗರಿಂದ ಬದುಕಿ ಬಂದರು - tourists Rescued

Last Updated : Aug 25, 2024, 9:05 AM IST

ABOUT THE AUTHOR

...view details