ಕರ್ನಾಟಕ

karnataka

ETV Bharat / state

ತುಮಕೂರು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆ - Lok Sabha Election 2024

ತುಮಕೂರು ಬಿಜಿಎಸ್ ಸರ್ಕಲ್​ನಿಂದ ಬೃಹತ್ ರೋಡ್ ಶೋ ಹಮ್ಮಿಕೊಳ್ಳುವ ಮೂಲಕ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರು ನಾಮಪತ್ರ ಸಲ್ಲಿಸಿದರು.

By ETV Bharat Karnataka Team

Published : Apr 4, 2024, 3:50 PM IST

Updated : Apr 4, 2024, 5:19 PM IST

Congress candidate Muddahanumegowda filed nomination paper
ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸಿದರು.

ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆ

ತುಮಕೂರು:ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರು ಎತ್ತಿನ ಗಾಡಿ ಮೂಲಕ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ಪ್ರಾರಂಭಿಕವಾಗಿ ನಗರದ ಟೌನ್​ಹಾಲ್ ವೃತ್ತದ ಬಳಿ ಜಮಾಯಿಸಿದ್ದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿ ಸಾಥ್ ನೀಡಿದರು.

ಎತ್ತಿನಗಾಡಿಯಲ್ಲಿ ಸಚಿವ ಪರಮೇಶ್ವರ್ ಹಾಗೂ ಕೆ ಎನ್ ರಾಜಣ್ಣ ಹಾಗೂ ಅಭ್ಯರ್ಥಿ ಮುದ್ದಹನುಮೇಗೌಡ ಮೊದಲಿಗೆ ಸ್ವಲ್ಪ ದೂರ ಸಾಗಿದರು. ನಂತರ ಬಿಜಿಎಸ್ ಸರ್ಕಲ್​ನಿಂದ ಡಿಸಿ ಕಚೇರಿವರೆಗೆ ಬೃಹತ್ ರ್ಯಾಲಿ ನಡೆಯಿತು. ನಂತರ ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿ ಆಗಿರುವ ಶುಭಾ ಕಲ್ಯಾಣ್​​ಗೆ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರು ನಾಮಪತ್ರ ಸಲ್ಲಿಕೆ ವೇಳೆ ಸಚಿವರಾದ ಜಿ. ಪರಮೇಶ್ವರ್, ಕೆ ಎನ್ ರಾಜಣ್ಣ, ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಹಾಜರಿದ್ದರು.

ಮೆರವಣಿಗೆಯಲ್ಲಿ ಕಲಾತಂಡಗಳು ಗಮನ ಸೆಳೆದವು. ಡೊಳ್ಳುಕುಣಿತ, ಗಾರುಡಿ ಗೊಂಬೆ ಕುಣಿತ, ನಾಸಿಕ್ ಡೋಲ್, ವೀರಗಾಸೆ ನೃತ್ಯ ಪ್ರದರ್ಶನಗಳು ನಡೆದವು. ಡೊಳ್ಳು ಕುಣಿತ ತಂಡವು ಪಿರಮಿಡ್ ರಚಿಸುವುದರೊಂದಿಗೆ ಕಾಂಗ್ರೆಸ್ ಬಾವುಟಗಳು ರಾರಾಜಿಸಿದವು.

ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ: ಜೆಡಿಎಸ್​ ರಾಜ್ಯಾಧ್ಯಕ್ಷರು ಬಂದ್ರೂ ಪ್ರೀತಂಗೌಡ ಗೈರು - Prajwal Revanna

Last Updated : Apr 4, 2024, 5:19 PM IST

ABOUT THE AUTHOR

...view details