ಕರ್ನಾಟಕ

karnataka

ETV Bharat / state

ದೂರು ನೀಡಲು ಬಂದ ಅಪ್ರಾಪ್ತ ಸಂತ್ರಸ್ತೆ ಮೇಲೆ ಆತ್ಯಾಚಾರ ಆರೋಪ : ಕಾನ್ಸ್​​ಟೇಬಲ್​ ಸೇರಿ ಇಬ್ಬರ ಬಂಧನ - MINOR RAPE CASE

ದೂರು ನೀಡಲು ಬಂದ ಅಪ್ರಾಪ್ತ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಾನ್ಸ್​​​ಟೇಬಲ್​ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

two-arrested-in-minor-rape-allegations-case-in-bengaluru
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Feb 24, 2025, 3:51 PM IST

ಬೆಂಗಳೂರು :ದೂರು ನೀಡಲು ಠಾಣೆಗೆ ಹೋದ ಆತ್ಯಾಚಾರಕ್ಕೊಳಗಾದ ಅಪ್ರಾಪ್ತೆಗೆ ಸಹಾಯ ಮಾಡುವ ಸೋಗಿನಲ್ಲಿ ರೇಪ್ ಮಾಡಿದ ಆರೋಪದ ಮೇಲೆ ಪೊಲೀಸ್​​ ಕಾನ್ಸ್​ಟೇಬಲ್​ ಸೇರಿ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಬೊಮ್ಮನಹಳ್ಳಿ ಠಾಣೆಯಲ್ಲಿ ಕಾನ್ಸ್​ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ್ ಹಾಗೂ ಸಂತ್ರಸ್ತೆಯ ಸ್ನೇಹಿತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

17 ವರ್ಷದ ಸಂತ್ರಸ್ತೆ ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನೆಲೆಸಿದ್ದಳು. ಈ ವೇಳೆ ನೆರೆಮನೆ ನಿವಾಸಿ, ವಿವಾಹಿತನಾಗಿದ್ದ ವ್ಯಕ್ತಿಯ ಪರಿಚಯವಾಗಿದೆ. ಆರೋಪಿಯು ಪ್ರೀತಿಸಿ ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ, ಬಾಲಕಿಯ ಮೇಲೆ ನಿರಂತರ ಆತ್ಯಾಚಾರವೆಸಗಿ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ನೊಂದ ಅಪ್ರಾಪ್ತೆ ತಾಯಿ ಬಳಿ ಹೇಳಿಕೊಂಡಿದ್ದಳು ಎಂದು ಬೊಮ್ಮನಹಳ್ಳಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆದರೆ, ದೂರು ನೀಡಲು ಹೋದ ಸಂತ್ರಸ್ತೆಯನ್ನು ಕಾನ್ಸ್​ಟೇಬಲ್ ಅರುಣ್ ಪರಿಚಯಿಸಿಕೊಂಡು ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಕಳೆದ ಡಿಸೆಂಬರ್​​ನಲ್ಲಿ ಬಿಟಿಎಂ ಲೇಔಟ್ ಓಯೋ ರೂಮಿಗೆ ಬಾಲಕಿಯನ್ನು ಕರೆಯಿಸಿಕೊಂಡ ಕಾನ್ಸ್​ಟೇಬಲ್ ಮದ್ಯದಲ್ಲಿ ಮತ್ತು ಬರುವ ಔಷಧಿ ಬೆರೆಸಿ ಕುಡಿಸಿ ಆಕೆ ಮೇಲೆ ಆತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ, ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ತನ್ನ ಬಳಿ ಖಾಸಗಿ ವಿಡಿಯೋಗಳಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.

ಇಬ್ಬರ ವಿರುದ್ಧ ಪೊಕ್ಸೊ ಹಾಗೂ ಬಿಎನ್ಎಸ್ ಕಾಯ್ದೆಯ ವಿವಿಧ ಸೆಕ್ಷನ್​ಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಮೈಕೋ ಲೇಔಟ್ ಪೊಲೀಸರು ಕೃತ್ಯ ನಡೆದ ಸ್ಥಳ ಆಧರಿಸಿ ಬೊಮ್ಮನಹಳ್ಳಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಈ ಸಂಬಂಧ ತನಿಖೆ ನಡೆಸಿ, ಇಬ್ಬರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿರುವುದಾಗಿ ಬೊಮ್ಮನಹಳ್ಳಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ ಪೌಷ್ಟಿಕ ಆಹಾರ ಅಕ್ರಮ ದಾಸ್ತಾನು ಪ್ರಕರಣ: ಮತ್ತೆ 6 ಮಂದಿ ಬಂಧನ

ABOUT THE AUTHOR

...view details