ಹಾವೇರಿ : ಬಹಿಲು ಬಹಿರ್ದೆಸೆ ಮುಗಿಸಿ ಕೈಕಾಲು ತೊಳೆಯಲು ಕೆರೆಗೆ ಹೋಗಿದ್ದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಜಗದೀಶ್ ನಾಗೋಜಿ ಎಂಬವರ ಪುತ್ರ ನಿಖಿಲ್ ನಾಗೋಜಿ (11) ಮತ್ತು ಪ್ರಕಾಶ್ ಚೋಳಪ್ಪನವರ್ ಎಂಬವರ ಪುತ್ರ ಧನುಷ್ ಚೊಳಪ್ಪನವರ್ (13) ಮೃತ ಬಾಲಕರು ಎಂದು ಗುರುತಿಸಲಾಗಿದೆ.
ಬಾಲಕರು ಗ್ರಾಮದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಬಳಿಕ ಬಹಿಲು ಬಹಿರ್ದೆಸೆ ಮುಗಿಸಿ ಕೈಕಾಲು ತೊಳೆಯಲು ದೊಡ್ಡಕೆರೆಗೆ ಹೋಗಿದ್ದರು. ಈ ಸಂದರ್ಭದಲ್ಲಿ ಬಾಲಕರು ಕಾಲುಜಾರಿ ಕೆರೆಗೆ ಬಿದ್ದಿದ್ದು, ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬಾಲಕರು ಕೆರೆಯಲ್ಲಿ ಮುಳುಗಿರುವ ಬಗ್ಗೆ ವಿಷಯ ತಿಳಿದ ಸ್ಥಳೀಯರು ಅವರನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಆನಂತರ ಬಾಲಕರನ್ನು ಹಾನಗಲ್ ತಾಲೂಕು ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದು, ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಇನ್ನು, ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ನಿಖಿಲ್ ತಂದೆ ಜಗದೀಶ್ ನಾಗೋಜಿ ಪ್ರಕರಣ ದಾಖಲಿಸಿದ್ದಾರೆ.