ಹಾವೇರಿ:ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಸಹೋದರರಿಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 12 ವರ್ಷದ ಬಸವರಾಜ್ ಪವಾರ್ ಮತ್ತು 9 ವರ್ಷದ ನಾಗರಾಜ್ ಪವಾರ್ ಎಂದು ಗುರುತಿಸಲಾಗಿದೆ.
Published : Mar 25, 2024, 11:58 AM IST
ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಸಾವು - brothers died in Haveri
ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಸಾವು
ತುಂಗಭದ್ರಾ ನದಿಯಲ್ಲಿ ಮರಳು ತುಂಬಿದ ಗುಂಡಿಯಲ್ಲಿ ಬಿದ್ದು ಇಬ್ಬರು ಸಹೋದರರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗ್ತಿದೆ. ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ತಮ್ಮ ಮಕ್ಕಳ ಸಾವಿಗೆ ಅಕ್ರಮ ಮರಳುಗಾರಿಕೆ ಕಾರಣ ಎಂದು ಪೋಷಕರು ಆರೋಪಿಸಿದರು. ಕುಮಾರಪಟ್ಟಣಂ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.