ಕರ್ನಾಟಕ

karnataka

ETV Bharat / state

ಮುಡಾ ಮೇಲಿನ ಇಡಿ ದಾಳಿ ಅಂತ್ಯ: ಮಹತ್ವದ ದಾಖಲೆಗಳನ್ನು ಕೊಂಡೊಯ್ದ ಅಧಿಕಾರಿಗಳು

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಇ.ಡಿ ದಾಳಿ ಅಂತ್ಯವಾಗಿದೆ. ಇ.ಡಿ ಅಧಿಕಾರಿಗಳು ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು ತೆರಳಿದ್ದಾರೆ.

By ETV Bharat Karnataka Team

Published : 12 hours ago

Updated : 12 hours ago

ಮುಡಾ ಮೇಲಿನ ಇಡಿ ದಾಳಿ ಅಂತ್ಯ
ಮುಡಾ ಮೇಲಿನ ಇಡಿ ದಾಳಿ ಅಂತ್ಯ (ETV Bharat)

ಮೈಸೂರು:ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಕಾಲ ನಡೆ ಇ.ಡಿ ( ಜಾರಿ ನಿರ್ದೇಶನಾಲಯದ) ದಾಳಿ ಮುಗಿದಿದೆ. ಇ.ಡಿ ಭಾನುವಾರ ಬೆಳಗಿನ ಜಾವ 2:40 ಗಂಟೆವರೆಗೂ ಪರಿಶೀಲನೆ ನಡೆಸಿ, ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದೆ.

ಇ.ಡಿ ಅಧಿಕಾರಿಗಳು ಸಿಎಂ‌ ಸಿದ್ದರಾಮಯ್ಯ ಪತ್ನಿ ವಾಪಸ್ ನೀಡಿದ 14 ನಿವೇಶನ ಹಾಗೂ ಮುಡಾದಲ್ಲಿ 50:50 ಅನುಪಾತದಡಿಯಲ್ಲಿ ನಡೆದಿರುವ ಅಕ್ರಮದ ದಾಖಲೆಗಳು ಹಾಗೂ ಹಾರ್ಡ್ ಡಿಸ್ಕ್ ಜೊತೆಗೆ ಜೆರಾಕ್ಸ್, ಮೂಲ ಪ್ರತಿಗಳನ್ನು ಸಂಗ್ರಹಿಸಿಕೊಂಡು ಬಿಗಿ ಪೊಲೀಸ್ ಬಂದೋಬಸ್ತ್​​ನಲ್ಲಿ ತೆಗೆದುಕೊಂಡು ಹೋಗಿದ್ದಾರೆ.

ಇ.ಡಿ. ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಲು ಮುಡಾದ ಆಯುಕ್ತ ರಘುನಂದನ್, ಕಾರ್ಯದರ್ಶಿ ಪ್ರಸನ್ನ ಕುಮಾರ್ ಸೇರಿದಂತೆ ಸಿಬ್ಬಂದಿಗಳು ಸಹಕಾರ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಸಿಎಂ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ ಮಾಡಿದ ಆರ್​ಟಿಐ ಕಾರ್ಯಕರ್ತ

Last Updated : 12 hours ago

ABOUT THE AUTHOR

...view details