ಚಾಮರಾಜನಗರ: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ತಾಲೂಕಿನ ತೆಳ್ಳನೂರು, ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮಗಳಲ್ಲಿ ಮನೆಗಳ ಗೋಡೆ ಕುಸಿದಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ. ತೆಳ್ಳನೂರು ಗ್ರಾಮದ ಸುಬ್ಬಮ್ಮ, ಬೇಗೂರಿನ ರತ್ಮಮ್ಮ ಎಂಬವರ ಮನೆ ಗೋಡೆ ಮಳೆಗೆ ನೆಲಕ್ಕುರುಳಿವೆ.
2ನೇ ಸಲ ಕೋಡಿ ಬಿದ್ದ ಕಮರಹಳ್ಳಿ ಕೆರೆ: ಮುಂಗಾರು ಆರ್ಭಟಕ್ಕೆ ಕೆಲ ತಿಂಗಳ ಹಿಂದೆ ಕೋಡಿ ಬಿದ್ದಿದ್ದ ಕಮರಹಳ್ಳಿ ಕೆರೆ, ಈಗ ಮತ್ತೊಮ್ಮೆ ಕೋಡಿ ಬಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.