ಕರ್ನಾಟಕ

karnataka

ETV Bharat / state

ಶೇ.5ರಷ್ಟು ಮಾತ್ರ ಸೇವಾ ಶುಲ್ಕ: ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಉಬರ್ ಮೇಲ್ಮನವಿ - Uber Appeal On Service Charge

ಕೇವಲ ಶೇಕಡಾ 5ರಷ್ಟು ಸೇವಾ ಶುಲ್ಕ ಆದೇಶ ಪ್ರಶ್ನಿಸಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್​ ಮುಂದೂಡಿದೆ.

By ETV Bharat Karnataka Team

Published : Jul 11, 2024, 7:22 AM IST

high court
ಹೈಕೋರ್ಟ್ (ETV Bharat)

ಬೆಂಗಳೂರು:ಓಲಾ, ಉಬರ್ ಟ್ಯಾಕ್ಸಿ ಸೇವೆಗಳಿಗೆ ಶೇಕಡಾ 5ರಷ್ಟು ಮಾತ್ರ ಸೇವಾ ಶುಲ್ಕವನ್ನು ಸಂಗ್ರಹಿಸುವಂತೆ ಏಕ ಸದಸ್ಯಪೀಠ ನೀಡಿದ ಆದೇಶ ಪ್ರಶ್ನಿಸಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಉಬರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಜನ್ ಪೂವಯ್ಯ, ''ಆಟೋ ಚಾಲಕ ಮತ್ತು ಅಗ್ರಿಗೇಟರ್ ನಡುವಿನ ಒಪ್ಪಂದವನ್ನು ಸಾರಿಗೆ ಇಲಾಖೆ ನಿಯಂತ್ರಿಸಲು ಅವಕಾಶವಿಲ್ಲ. ಆದರೆ, ಏಕಸದಸ್ಯ ಪೀಠ ಉಬರ್‌ ಅನ್ನು ಅಗ್ರಿಗೇಟರ್ ಎಂದು ಪರಿಗಣಿಸಿದೆ. ಆದರೆ, ಕಂಪನಿ ಎಂಬುದಾಗಿ ತಿಳಿಸಿದೆ. ಇದರಿಂದ ಕಂಪೆನಿ ಯಾವುದೇ ರೀತಿಯ ಸಾರಿಗೆ ಸೇವೆ ನಡೆಸುವುದಕ್ಕೆ ಅವಕಾಶವಿಲ್ಲ. ಆದ್ದರಿಂದ ಮೋಟಾರು ವಾಹನಗಳ ಕಾಯ್ದೆಯಡಿ ನಮ್ಮ ಕಕ್ಷಿದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ನೀಡಿದಂತಾಗಿದೆ. ಆದ್ದರಿಂದ ಏಕಸದಸ್ಯ ಪೀಠ ಆದೇಶವನ್ನು ಮಾರ್ಪಡಿಸಬೇಕು'' ಎಂದು ಕೋರಿದರು.

ಇದಕ್ಕೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ''ಅರ್ಜಿದಾರ ಸಂಸ್ಥೆಗಳು ಅತ್ಯಂತ ಪ್ರಬಲವಾಗಿದ್ದು, ಅವರು ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ದುರುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪವಿದೆ. ಅವರ ನಿಯಮಗಳನ್ನು ಉಲ್ಲಂಘಿಸುತ್ತಿದ್ದಲ್ಲಿ ಸ್ಪರ್ಧಾತ್ಮಕ ಕಾಯಿದೆಯ ಉಲ್ಲಂಘನೆ ಮಾಡುತ್ತಿದ್ದು, ಈ ಕುರಿತು ವಿಚಾರಣೆ ನಡೆಸಲು ಭಾರತೀಯ ಸ್ಪರ್ಧಾ ಆಯೋಗಕ್ಕೆ ಕಳುಹಿಸಬೇಕು'' ಎಂದು ನ್ಯಾಯಪೀಠಕ್ಕೆ ವಿವರಿಸಿದರು.

''ಅಲ್ಲದೆ, ಅಗ್ರಿಗ್ರೇಟರ್‌ಗಳು, ಕಾರುಗಳು, ಆಟೋ ರಿಕ್ಷಾಗಳು, ದ್ವಿಚಕ್ರವಾಹನಗಳಿಗೆ ಪರವಾನಿಗೆ ಪಡೆದುಕೊಳ್ಳಬೇಕು ಎಂಬುದಾಗಿ ಸರ್ಕಾರ ತಿಳಿಸಿದೆ. ಈ ಸಂಬಂಧ ಈವರೆಗೂ ಅಗ್ರಿಗ್ರೇಟರ್‌ಗಳು ಯಾವುದೇ ರೀತಿಯಲ್ಲಿ ನೋಂದಣಿ ಮಾಡುವುದಕ್ಕೆ ಮುಂದಾಗಿಲ್ಲ. ಅವರಿಗೆ ಕಾನೂನಿನ ಭಯವಿಲ್ಲ'' ಎಂದು ತಿಳಿಸಿದರು.

''ಏಕಸದಸ್ಯ ಪೀಠ ಆದೇಶದಲ್ಲಿನ ಕೆಲ ಅಂಶಗಳನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಲು ನಿರ್ಧರಿಸಿದೆ. ಹೀಗಾಗಿ, ವಿಚಾರಣೆ ಮುಂದೂಡಬೇಕು'' ಎಂದು ಕೋರಿದರು. ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು.

ಪ್ರಕರಣವೇನು?:ಆಟೋರಿಕ್ಷಾ ಅಗ್ರಿಗೇಟರ್ ಸೇವೆ ಒದಗಿಸಲು ಚಾಲ್ತಿಯಲ್ಲಿರುವ ಪರವಾನಗಿ ಹೊಂದಿರುವ ಸಂಸ್ಥೆಗಳು ಪ್ರಯಾಣ ದರಗಳ ಮೇಲೆ ಜಿಎಸ್‌ಟಿ ಸೇರಿ ಶೇ.5ರಷ್ಟು ಮಾತ್ರ ಸೇವಾ ಶುಲ್ಕ ವಿಧಿಸಲು ಆದೇಶಿಸಿತ್ತು. ಈ ಸಂಬಂಧ ರಾಜ್ಯದ ಎಲ್ಲಾ ಸಾರಿಗೆ ಪ್ರಾಧಿಕಾರಗಳಿಗೆ ಸರ್ಕಾರ ನಿರ್ದೇಶನ ನೀಡಿತ್ತು. ಇದನ್ನು ಓಲಾ ಮತ್ತು ಉಬರ್ ಕಂಪನಿಗಳು ಆಕ್ಷೇಪಿಸಿ ಹೈಕೋರ್ಟ್ ಮೆಟ್ಟಿಲೇರಿವೆ.

ಇದನ್ನೂ ಓದಿ:ಕಲ್ಲಡ್ಕ ಪ್ರಭಾಕರ ಭಟ್​ ವಿರುದ್ದದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ - Kalladka Prabhakar Bhat

ABOUT THE AUTHOR

...view details