ಕರ್ನಾಟಕ

karnataka

ETV Bharat / state

ನಾಳೆ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ: ವಿಜಯದಶಮಿ ಪೂಜಾ ವಿಧಾನಗಳ ಮಾಹಿತಿ ಇಲ್ಲಿದೆ

ಮೈಸೂರಿನಲ್ಲಿ ನಾಳೆ ವಿಶ್ವವಿಖ್ಯಾತ ದಸರಾ ಜಂಬೂಸವಾರಿ ನಡೆಯಲಿದೆ.

By ETV Bharat Karnataka Team

Published : 4 hours ago

Updated : 47 minutes ago

jamboo-savari
ವಿಶ್ವವಿಖ್ಯಾತ ಮೈಸೂರು ಜಂಬೂಸವಾರಿ (ಸಂಗ್ರಹ ಚಿತ್ರ) (ETV Bharat)

ಮೈಸೂರು:ಅರಮನೆ ನಗರಿ ಮೈಸೂರಿನಲ್ಲಿ ಅಕ್ಟೋಬರ್‌ 12ರಂದು (ನಾಳೆ) ವಿ‍ಶ್ವವಿಖ್ಯಾತ ಮೈಸೂರು ದಸರಾದ ಅದ್ಧೂರಿ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ನವರಾತ್ರಿಯ ಕೊನೆಯ ದಿನ ವಿಜಯದಶಮಿಯಂದು ಈ ಐತಿಹಾಸಿಕ ಮೆರವಣಿಗೆ ನಡೆಯುವುದು ಪದ್ಧತಿ.

ಅರಮನೆಯಲ್ಲಿ ವಿಜಯದಶಮಿಯ ಪೂಜಾ ವಿಧಾನಗಳು ಹೇಗಿರುತ್ತವೆ?:ಬೆಳಗ್ಗೆ 9.45ಕ್ಕೆ ಪೂಜಾ ವಿಧಾನಗಳು ಆರಂಭ. ಈ ಸಂದರ್ಭದಲ್ಲಿ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸುವಿನೊಂದಿಗೆ ದೇವರನ್ನು ಅರಮನೆಗೆ ಕರೆತರಲಾಗುತ್ತದೆ. ಬೆಳಗ್ಗೆ 10.15ಕ್ಕೆ ಉತ್ತರ ಪೂಜೆಯ ಬಳಿಕ ಆನೆ ಬಾಗಿಲಿನ ಮುಂಭಾಗದಲ್ಲಿ ಜಟ್ಟಿ ಕಾಳಗ ನಡೆಯಲಿದೆ. 11.20ರಿಂದ 11.45ರವರೆಗೆ ಆನೆ ಬಾಗಿಲನ ಮೂಲಕ ವಿಜಯಯಾತ್ರೆ ಹೊರಡುವ ಕನ್ನಡಾಂಬೆ ದೇವಾಲಯದ ಒಳಭಾಗದಲ್ಲಿರುವ ಬನ್ನಿ ಮರಕ್ಕೆ ಯದುವೀರ್‌ ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ರಾಜವಂಶಸ್ಥರು ಮನೆಗೆ ಮರಳುವ ಮೂಲಕ ನವರಾತ್ರಿಯ 10 ದಿನದ ಧಾರ್ಮಿಕ ಕಾರ್ಯಗಳು ಪೂರ್ಣಗೊಳ್ಳಲಿವೆ.

ನಾಡಿನ ಅಧಿದೇವತೆ ಚಾಮುಂಡೇಶ್ವರಿ (ಸಂಗ್ರಹ ಚಿತ್ರ) (ETV Bharat)

ಮಧ್ಯಾಹ್ನ 1.44ರಿಂದ 2.10ರ ಶುಭ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದ ಕೋಟೆ ಆಂಜನೇಯ ದೇವಾಲಯದ ಬಳಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಹಾಗೂ ಗಣ್ಯರು ಪೂಜೆ ಸಲ್ಲಿಸಿದ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ದೊರೆಯುತ್ತದೆ. ಆ ಬಳಿಕ ನಾಡಿನ ಕಲೆ, ಸಂಸ್ಕೃತಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಬಿಂಬಿಸುವ ಸುಮಾರು 51 ಸ್ತಬ್ಧಚಿತ್ರಗಳು ಹಾಗೂ ಕಲಾ ತಂಡಗಳ ಮೆರವಣಿಗೆ ನಡೆಯಲಿದೆ.

ಜಂಬೂಸವಾರಿಯ ಸಂಗ್ರಹ ಚಿತ್ರ (ETV Bharat)

ಸಂಜೆ 4 ಗಂಟೆಯಿಂದ 4.30ರೊಳಗಿನ ಶುಭ ಕುಂಭಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಗಣ್ಯರು 750 ಕೆ.ಜಿ ತೂಕದ ಚಿನ್ನದ ಅಂಬಾರಿಯಲ್ಲಿರುವ ಸರ್ವಾಲಂಕಾರಭೂಷಿತೆ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುತ್ತಾರೆ. ಇದರೊಂದಿಗೆ ಜಂಬೂಸವಾರಿ ಪ್ರಾರಂಭವಾಗುತ್ತದೆ.

ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಆನೆಯೊಂದಿಗೆ ಗಜಪಡೆ ಅರಮನೆಯಿಂದ ಬನ್ನಿಮಂಟಪದವರೆಗೆ ಸುಮಾರು 5 ಕಿ.ಮೀಗೂ ಹೆಚ್ಚು ದೂರ ಸಾಗಿ ಬರಲಿದೆ. ಮೆರವಣಿಗೆಯಲ್ಲಿ ಆಕರ್ಷಕ ಸ್ತಬ್ದಚಿತ್ರಗಳು, ಕಲಾತಂಡಗಳ ಜೊತೆಗೆ ಕರ್ನಾಟಕ ಪೊಲೀಸ್‌ ವಾದ್ಯ ತಂಡ, ಅಶ್ವದಳ, ಎನ್​​.ಸಿ.ಸಿ, ಕೆಎಸ್​ಆರ್​ಪಿ ತುಕಡಿಗಳು ಇರಲಿವೆ.

ಅರಮನೆಯ ಮುಂಭಾಗದಲ್ಲಿ ದಸರಾ ಜಂಬೂ ಸವಾರಿ ಮೆರವಣಿಗೆ (ಸಂಗ್ರಹ ಚಿತ್ರ) (ETV Bharat)

ಜಂಬೂಸವಾರಿ ಮೆರವಣಿಗೆ ಅರಮನೆಯಿಂದ ಹೊರಟು ಅರಮನೆಯ ಉತ್ತರ ದ್ವಾರ, ಕೆ.ಆರ್.ಸರ್ಕಲ್‌, ಸಯ್ಯಾಜಿರಾವ್‌ ರಸ್ತೆ, ಬೂಂಬು ಬಜಾರ್‌, ಹೈವೇ ಸರ್ಕಲ್‌ ಮೂಲಕ ಬನ್ನಿಮಂಟಪ ತಲುಪುತ್ತದೆ.

ಅರಮನೆಯ ಮುಂಭಾಗದಲ್ಲಿ ನೃತ್ಯದಲ್ಲಿ ತೊಡಗಿರುವ ಕಲಾವಿದರು (ಸಂಗ್ರಹ ಚಿತ್ರ) (ETV Bharat)

ಪಂಜಿನ ಕವಾಯತು: ಸಂಜೆ 7 ಗಂಟೆಗೆ ಆಕರ್ಷಕ ಪಂಜಿನ ಕವಾಯತು ಪ್ರದರ್ಶನ ನಡೆಯಲಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ಪಂಜಿನ ಕವಾಯತು ವೀಕ್ಷಿಸಿ, ವಂದನೆ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ:ಮೈಸೂರು: ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧಪೂಜೆ ನೆರವೇರಿಸಿದ ಯದುವೀರ್

Last Updated : 47 minutes ago

ABOUT THE AUTHOR

...view details