ಕರ್ನಾಟಕ

karnataka

ETV Bharat / state

ಚಿಕ್ಕೋಡಿ: ಮದುವೆಗೆ ಒಂದು ದಿನ ಮುನ್ನ ಹೃದಯಾಘಾತದಿಂದ ಯುವಕ ಸಾವು! - Heart Attack - HEART ATTACK

ಮದುವೆಗೆ ಒಂದು ದಿನ ಬಾಕಿ ಇರುವಾಗ ಯುವಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.

YOUNG MAN DIED FROM HEART ATTACK
ಮೃತ ದುರ್ದೈವಿ ಸದಾಶಿವ ರಾಮಪ್ಪ ಹೋಸಲ್ಕಾರ (31) (ETV Bharat)

By ETV Bharat Karnataka Team

Published : Sep 4, 2024, 9:45 AM IST

ಚಿಕ್ಕೋಡಿ:ಮದುವೆಗೆ ಒಂದು ದಿನ ಮುನ್ನ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಝುಂಜರವಾಡ ಆರ್​ಸಿ ಗ್ರಾಮದ ನಿವಾಸಿ ಸದಾಶಿವ ರಾಮಪ್ಪ ಹೋಸಲ್ಕಾರ (31) ಮೃತಪಟ್ಟಿದ್ದಾರೆ.

ಸೆಪ್ಟೆಂಬರ್ 5ರಂದು ಈ ಯುವಕನ ಮದುವೆ ನಿಶ್ಚಯವಾಗಿತ್ತು. ಕುಟುಂಬ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಗೆ ಮನೆ ಮುಂದೆ ಮದುವೆಪೂರ್ವ ಸಿದ್ಧತೆ ನಡೆಸಲಾಗುತ್ತಿತ್ತು. ಸದಾಶಿವ ಸ್ನೇಹಿತನ ಜೊತೆಗೆ ಮದುವೆ ಕೆಲಸದ ಬಗ್ಗೆ ದೂರವಾಣಿಯಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಹಠಾತ್ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅಥಣಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಅಷ್ಟರಲ್ಲೇ ಯುವಕನ ಪ್ರಾಣಪಕ್ಷಿ ಹಾರಿ ಹೋಗಿದೆ.

ಮನೆಗೆ ಆಸರೆಯಾಗಿದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ:ದೇವರ ದರ್ಶನ ಪಡೆದು ಹೊರಬಂದ ಭಕ್ತ ಹೃದಯಾಘಾತದಿಂದ ಸಾವು!

ABOUT THE AUTHOR

...view details