ಕರ್ನಾಟಕ

karnataka

ETV Bharat / state

ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಕೊಲೆ; ದೇಹ ಕತ್ತರಿಸಿ ಫ್ರಿಡ್ಜ್​ನಲ್ಲಿ ಇಟ್ಟ ಆರೋಪಿ - Murder In Bengaluru - MURDER IN BENGALURU

ಬೆಂಗಳೂರಿನ ವೈಯಾಲಿಕಾವಲ್​ನಲ್ಲಿ ಮಹಿಳೆಯೋರ್ವಳನ್ನು ಬರ್ಬರವಾಗಿ ಹತ್ಯೆ ಮಾಡಿ ಮೃತದೇಹವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.

MURDER IN BENGALURU
ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಕೊಲೆ (ETV Bharat)

By ETV Bharat Karnataka Team

Published : Sep 21, 2024, 4:45 PM IST

Updated : Sep 21, 2024, 4:51 PM IST

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲೂದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ರೀತಿಯ ಭಯಾನಕ ಹತ್ಯೆಯ ಘಟನೆಯೊಂದು ನಡೆದಿದೆ. ಮಹಿಳೆಯೋರ್ವಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇದಾಗಿದೆ. ಮಹಾಲಕ್ಷ್ಮೀ (29) ಕೊಲೆಗೀಡಾದ ಮಹಿಳೆ. ಕೊಲೆ ಮಾಡಿದ್ದಲ್ಲದೇ, ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟಿರುವುದು ಪತ್ತೆಯಾಗಿದೆ. ವೈಯಾಲಿಕಾವಲ್​ನ ಮುನ್ನೇಶ್ವರ ಬ್ಲಾಕ್​ನ ಮನೆಯೊಂದರ ಮೊದಲ ಮಹಡಿಯಲ್ಲಿ ಈ ಘಟನೆ ನಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ಹೆಚ್ಚುವರಿ ಪೊಲೀಸ್​ ಆಯುಕ್ತ ಸತೀಶ್ ಕುಮಾರ್, ''ವೈಯಾಲಿಕಾವಲ್​ ಪೊಲೀಸ್​ ಠಾಣಾ ವ್ಯಾಪ್ತಿಯ ಮನೆಯೊಂದರ ಮೊದಲ ಮಹಡಿಯಲ್ಲಿ ಮಹಿಳೆಯ ಮೃತದೇಹವನ್ನು ತುಂಡರಿಸಿ​ ಫ್ರಿಡ್ಜ್​ನಲ್ಲಿ ಇಟ್ಟಿರುವ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಇದು ಸಂಭವಿಸಿ ನಾಲ್ಕೈದು ದಿನಗಳು ಆಗಿರಬಹುದು. ಕೊಲೆಯಾಗಿರುವ ಮಹಿಳೆಯ ಗುರುತು ಪತ್ತೆಯಾಗಿದೆ. ಹೊರರಾಜ್ಯದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಡಾಗ್​ ಸ್ಕ್ವಾಡ್, ಬೆರಳಚ್ಚು ತಜ್ಞರ ತಂಡ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಎಫ್​ಎಸ್​ಎಲ್​ ತಂಡ ಕೂಡ ಆಗಮಿಸುತ್ತಿದೆ. ​ತನಿಖೆ ಬಳಿಕ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಲಿದೆ'' ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಕೊಲೆ (ETV Bharat)

ಮಹಿಳೆ ಇತ್ತೀಚೆಗಷ್ಟೇ ವೈಯಾಲಿಕಾವಲ್​ನ ಮನೆಗೆ ಬಂದಿದ್ದಳು. ಇಂದು ಬೆಳಗ್ಗೆ ಆಕೆಯ ತಾಯಿ-ಸಹೋದರಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

''ನಾಯಿ ನೋಡಿಕೊಳ್ಳುವ ವಿಚಾರವಾಗಿ ಮೃತ ಯುವತಿ ಆಗಾಗ ನಮ್ಮೊಂದಿಗೆ ಮಾತನಾಡುತ್ತಿದ್ದಳು. ಹೆಚ್ಚು ಮಾತನಾಡುತ್ತಿರಲಿಲ್ಲ. ಮನೆಯಲ್ಲಿ ಒಬ್ಬಂಟಿಯಾಗಿ ಇರುತ್ತಿದ್ದಳು. ಕೆಲವು ದಿನಗಳ ಕಾಲ ಅವರ ಅಣ್ಣ ಇದ್ದ. ಅವರು ಹೋದ ಬಳಿಕ ಈಕೆ ಒಬ್ಬಳೇ ಮನೆಯಲ್ಲಿ ಇರುತ್ತಿದ್ದಳು. ಅವಳಿಗೆ ಮದುವೆಯಾಗಿತ್ತು ಎಂಬ ವಿಚಾರ ನಮಗೆ ಇವತ್ತೇ ಗೊತ್ತಾಯಿತು. ಇಲ್ಲಿಗೆ ಬಂದು ಐದು ತಿಂಗಳು ಆಗಿತ್ತು. ಬೆಳಗ್ಗೆ 9;30ಕ್ಕೆ ಹೊರಗೆ ಹೋದರೆ ರಾತ್ರಿ 10:30ಕ್ಕೆ ಮನೆಗೆ ವಾಪಸ್​ ಬರುತ್ತಿದ್ದಳು. ಇವತ್ತು ಆಕೆಯ ತಾಯಿ ಮತ್ತು ಅಕ್ಕ ಬಂದಿದ್ದರು. ಮನೆಯಿಂದ ಏನೋ ವಾಸನೆ ಬರುತ್ತಿದೆ ಎಂದು ಫ್ರಿಡ್ಜ್​ ತೆರೆದಿದಾಗ ಪ್ರಕರಣ ಬೆಳಕಿಗೆ ಬಂದಿದೆ'' ಎಂದು ಮೇರಿ ಎಂಬಾಕೆ ಘಟನೆಗೆ ಬೇಸರ ವ್ಯಕ್ತಪಡಿಸಿದರು.

ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ವೈಯಾಲಿಕಾವಲ್​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಯುವತಿಗಾಗಿ ಸ್ನೇಹಿತರ ನಡುವೆ ಶುರುವಾದ ಗಲಾಟೆ ಹತ್ಯೆಯಲ್ಲಿ ಅಂತ್ಯ! - Young Man Murder

Last Updated : Sep 21, 2024, 4:51 PM IST

ABOUT THE AUTHOR

...view details