ಕರ್ನಾಟಕ

karnataka

ETV Bharat / videos

ಕಾರವಾರ: ಪ್ರವಾಸಕ್ಕೆ ಬಂದ ವಿದ್ಯಾರ್ಥಿ ಸಮುದ್ರದ ಅಲೆಗೆ ಸಿಲುಕಿ ಸಾವು, ಓರ್ವನ ರಕ್ಷಣೆ - STUDENT DIES

By ETV Bharat Karnataka Team

Published : 5 hours ago

ಕಾರವಾರ: ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಸಮುದ್ರದಲ್ಲಿ ಈಜಾಡುತ್ತಿರುವಾಗ ಅಲೆಗೆ ಕೊಚ್ಚಿ ಹೋಗಿ ಓರ್ವ ಮೃತಪಟ್ಟು, ಇನ್ನೋರ್ವನನ್ನು ರಕ್ಷಣೆ ಮಾಡಿರುವ ಘಟನೆ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಬೀಚ್​ನಲ್ಲಿ ನಡೆದಿದೆ. 

ಬೆಂಗಳೂರಿನ ಜಾಲಹಳ್ಳಿ ಕ್ರಾಸಿನ ವಿದ್ಯಾ ಸೌದ್ಯ ಪಿಯು ಕಾಲೇಜಿನ ಸುಮಾರು 200 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಆಗಮಿಸಿದ್ದರು. ಈ ವೇಳೆ ಸಮುದ್ರದಲ್ಲಿ ಈಜಾಡಲು ಇಳಿದಿದ್ದ ವಿದ್ಯಾರ್ಥಿಗಳ ಪೈಕಿ ಇಬ್ಬರು ಅಲೆಗೆ ಕೊಚ್ಚಿ ಹೋಗಿದ್ದರು. ಈ ಬಗ್ಗೆ ಸ್ಥಳದಲ್ಲಿದ್ದ ಇತರರು ಕೂಗಿಕೊಂಡಾಗ ತಕ್ಷಣ ಲೈಫ್ ಗಾರ್ಡ್ ಸಿಬ್ಬಂದಿ ಹಾಗೂ ನೇತ್ರಾಣಿ ಅಡ್ವೆಂಚರ್ಸ್ ಸ್ಪೋರ್ಟ್ಸ್ ಸಿಬ್ಬಂದಿ ಧನುಷ್ ಎಂಬ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿದ್ದಾರೆ.‌ ಆದರೆ ಬೆಂಗಳೂರಿನ ಗೌತಮ್​ (17) ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಈ ಬಗ್ಗೆ ಮುರುಡೇಶ್ವರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾಸನ: ವಸತಿ ಗೃಹದಲ್ಲಿ ಮುಖ್ಯ ಶಿಕ್ಷಕ ಆತ್ಮಹತ್ಯೆ

ಇದನ್ನೂ ಓದಿ: ಪ್ರಯಾಣಿಕರಿದ್ದ ದೋಣಿ ಮುಳುಗಿ 78 ಮಂದಿ ಸಾವು: 10 ಮಂದಿಯ ರಕ್ಷಣೆ - 78 people died when boat capsized

ABOUT THE AUTHOR

...view details