Published : Jul 2, 2024, 7:15 AM IST
ಶಿವಮೊಗ್ಗ: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ, 8ಕ್ಕೂ ಹೆಚ್ಚು ಅಂಗಡಿಗಳಿಗೆ ಹಾನಿ - Fire Accident
ಶಿವಮೊಗ್ಗ: ಗಾಂಧಿಬಜಾರ್ನ ಬಟ್ಟೆ ಮಾರ್ಕೆಟ್ನಲ್ಲಿ ಅಗ್ನಿಅವಘಡ ಸಂಭವಿಸಿದ್ದು, 8ಕ್ಕೂ ಅಧಿಕ ಬಟ್ಟೆ ಅಂಗಡಿಗಳು ಬೆಂಕಿಗಾಹುತಿಯಾಗಿವೆ. ಸೋಮವಾರ ರಾತ್ರಿ 10:30ರ ಸುಮಾರಿಗೆ ಘಟನೆ ನಡೆದಿದೆ.
ಬಸವಣ್ಣ ದೇವಾಲಯದ ಹಿಂಭಾಗದ ಬಟ್ಟೆ ಮಾರ್ಕೆಟ್ನ ಪ್ರವೇಶ ದ್ವಾರದ ಸಮೀಪ ಇರುವ ಟೆಂಟ್ ಅಂಗಡಿಯಲ್ಲಿ ಮೊದಲು ಬೆಂಕಿಯಿಂದ ದಟ್ಟ ಹೊಗೆ ಕಾಣಿಸಿಕೊಂಡಿತು. ಸ್ಥಳೀಯರು ತಕ್ಷಣ ಮೆಸ್ಕಾಂ ಕಚೇರಿಗೆ ಕರೆ ಮಾಡಿ, ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ನಂತರ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.
ಈ ಕುರಿತು ಶಾಸಕ ಚನ್ನಬಸಪ್ಪ ಪ್ರತಿಕ್ರಿಯಿಸಿ, "ಸಂಭಾವ್ಯ ದೊಡ್ಡ ಅವಘಡ ತಪ್ಪಿದೆ. ಯಾವುದೇ ಜೀವಹಾನಿಯಾಗಿಲ್ಲ" ಎಂದು ಮಾಹಿತಿ ನೀಡಿದರು.
ಸ್ಥಳೀಯ ನಿವಾಸಿ ಶಂಕರ್ ಮಾತನಾಡಿ, "ಇಲ್ಲಿ ಎಷ್ಟು ಅಂಗಡಿಗಳಿಗೆ ಬೆಂಕಿ ಬಿದ್ದಿದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಬೆಳಗ್ಗೆ ನೋಡಬೇಕು. ಸುಮಾರು ಎಂಟು ಅಂಗಡಿಗಳು ಸುಟ್ಟು ಹೋಗಿವೆ ಎಂಬ ಮಾಹಿತಿ ಬಂದಿದೆ" ಎಂದರು. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಗುಂಡ್ಲುಪೇಟೆ ಠಾಣೆ ಆವರಣದಲ್ಲಿ ಪೊಲೀಸರು ಸಾಕಿದ್ದ ನಾಯಿಯಿಂದ ಮೂವರಿಗೆ ಕಡಿತ - dog bite