ಕರ್ನಾಟಕ

karnataka

ETV Bharat / snippets

ಯೋಗೀಶ್​ ಗೌಡ ಕೊಲೆ ಪ್ರಕರಣ: ಮತ್ತೆ ಧಾರವಾಡಕ್ಕೆ ಆಗಮಿಸಿದ ಸಿಬಿಐ

By ETV Bharat Karnataka Team

Published : Jul 8, 2024, 12:48 PM IST

ಯೋಗೀಶ್​ ಗೌಡ
ಯೋಗೀಶ್​ ಗೌಡ (ETV Bharat)

ಧಾರವಾಡ: ಹುಬ್ಬಳ್ಳಿ ಜಿಲ್ಲಾ ಪಂಚಾಯತ್​ ಸದಸ್ಯ ಯೋಗೀಶ್​ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ತನಿಖೆಗೆ ಸಿಬಿಐ ತನಿಖಾಧಿಕಾರಿಗಳ ತಂಡ ಧಾರವಾಡಕ್ಕೆ ಆಗಮಿಸಿದೆ. ಈಗಾಗಲೇ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಹ ಸಲ್ಲಿಸಿದ್ದಾರೆ.

ಧಾರವಾಡದ ಸಪ್ತಾಪೂರದ ಜಿಮ್​ನಲ್ಲಿ ಯೋಗೀಶ್ ಗೌಡ ಕೊಲೆಯಾಗಿತ್ತು. ಇಂದು ಆ ಸ್ಥಳಕ್ಕೆ ತನಿಖಾಧಿಕಾರಿ ರಾಕೇಶ್ ರಂಜನ್ ನೇತೃತ್ವದ ತಂಡ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶೆಟ್ಟಿ ಅವರಿಗೆ ಸಿಬಿಐ ಅಧಿಕಾರಿ ರಾಕೇಶ ರಂಜನ್ ಪ್ರಕರಣದ ಮಾಹಿತಿ ನೀಡಿದರು.

ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಪ್ರಮುಖ ಆರೋಪಿ. ಈಗಾಗಲೇ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಇದೀಗ ಸಾಕ್ಷಿಗಳಿಗೆ ಸಮನ್ಸ್ ನೀಡಲು ಸಿಬಿಐ ತಂಡ ಆಗಮಿಸಿದೆ.

ಇದನ್ನೂ ಓದಿ:ಬೆಂಗಳೂರು: ಕುಟುಂಬದ ಜೊತೆ ತೆರಳುತ್ತಿದ್ದವರ ಮೇಲೆ ಯುವಕರ ರ‍್ಯಾಗಿಂಗ್! - Ragging

ABOUT THE AUTHOR

...view details