ಬೆಂಗಳೂರು:ಪರ್ವತಾರೋಹಿ ಹಾಗು ರಾಷ್ಟ್ರಮಟ್ಟದ ಮಹಿಳಾ ಕ್ರೀಡಾಪಟು ಆಶಾ ಮಾಳವೀಯ ಅವರ ಸಾಧನೆ ಮತ್ತು ಅವರು ಹಮ್ಮಿಕೊಂಡಿರುವ 28 ರಾಜ್ಯಗಳ ಸೈಕಲ್ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು.
ಆಶಾ ಮಾಳವೀಯ ಸೈಕಲ್ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಕೆ
Published : Jul 3, 2024, 7:12 AM IST
ಪರ್ವತಾರೋಹಿಯಾಗಿ ಹಲವು ದಾಖಲೆಗಳನ್ನು ನಿರ್ಮಿಸಿರುವ ಮಧ್ಯಪ್ರದೇಶದ ಯುವತಿ ಆಶಾ ಮಾಳವೀಯ, ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ, ಸ್ತ್ರೀ ಸಬಲೀಕರಣ ಹಾಗೂ ಸ್ತ್ರೀ ಸುರಕ್ಷತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ದೇಶದ ಎಲ್ಲ ರಾಜ್ಯಗಳನ್ನು ಒಳಗೊಂಡಂತೆ ಒಟ್ಟು 25,000 ಕಿ.ಮೀ ಸೈಕಲ್ ಯಾತ್ರೆ ನಡೆಸುತ್ತಿದ್ದೇನೆ. ಅದರ ಭಾಗವಾಗಿ ಕರ್ನಾಟಕಕ್ಕೆ ಬಂದಿರುವುದಾಗಿ ತಿಳಿಸಿದರು.
ಇದಕ್ಕೂ ಮುನ್ನ, ಅಭಿಯಾನದ ಭಾಗವಾಗಿ ಬೆಂಗಳೂರಿಗೆ ಆಗಮಿಸಿದ ಆಶಾ ಸಾಧನೆಯ ಕುರಿತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಸಿಎಂಗೆ ವಿವರಿಸಿದರು. ಬಳಿಕ ಅಭಿಯಾನದ ಉದ್ದೇಶವನ್ನು ಶ್ಲಾಘಿಸಿದ ಸಿದ್ದರಾಮಯ್ಯ, ಆಶಾರ ಮುಂದಿನ ಪ್ರಯಾಣಕ್ಕೆ ಶುಭ ಕೋರಿದರು. ಸಚಿವ ಬೈರತಿ ಸುರೇಶ್ ಕೂಡಾ ಉಪಸ್ಥಿತರಿದ್ದು ಅಭಿನಂದಿಸಿದರು.