ಚಾಮರಾಜನಗರ:ಅಡುಗೆ ಮೇಲ್ವಿಚಾರಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದ ಬಿಸಿಎಂ ವಿದ್ಯಾರ್ಥಿನಿಲಯದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದ ಪ್ರಮೋದ್ ಕುಮಾರ್ (29) ಮೃತ ವ್ಯಕ್ತಿ. ಈತ ಬಿಸಿಎಂ ವಿದ್ಯಾರ್ಥಿ ನಿಲಯದ ರೂಮ್ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೇಗೂರಿನ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.