ದಾವಣಗೆರೆ: ನೀರಿನ ಮೋಟರ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಗೃಹಿಣಿಯೊಬ್ವಳು ಮೃತಪಟ್ಟಿರುವ ಘಟನೆ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ನಡೆದಿದೆ. ಸೌಭಾಗ್ಯ ನರಸಿಂಹಪ್ಪ (46) ಮೃತ ಮಹಿಳೆ. ಈ ಘಟನೆ ಗುರುವಾರ ಜರುಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೃತ ಸೌಭಾಗ್ಯ ಬೇಲಿಮಲ್ಲೂರು ಗ್ರಾಮದ ಉಮಾ ಪ್ರಗತಿ ಪ್ರೌಢಶಾಲೆಯಲ್ಲಿ ಮುಖ್ಯ ಅಡುಗೆ ತಯಾರಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಶಾಲೆಗೆ ರಜೆ ಹಾಕಿ ಬಿತ್ತನೆ ಕಾರ್ಯಕ್ಕೆ ಹೋಗಲು ಮನೆಯಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಮನೆಯಲ್ಲಿ ನೀರು ತುಂಬಿಸುವ ಸಲುವಾಗಿ ಮೋಟಾರ್ ಆನ್ ಮಾಡಿದಾಗ ಈ ಘಟನೆ ನಡೆದಿದೆ.