ಕರ್ನಾಟಕ

karnataka

ವಿದ್ಯಾರ್ಥಿನಿಯ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆ; ಆರೋಪಿ ಅರೆಸ್ಟ್

By ETV Bharat Karnataka Team

Published : Aug 13, 2024, 8:34 PM IST

ASSAULT ON STUDENT
ಮೂಡುಬಿದಿರೆ ಪೊಲೀಸ್​ ಠಾಣೆ (ETV Bharat)

ಮೂಡುಬಿದಿರೆ: ದ‌.ಕ.ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜೊಂದರ ತರಗತಿಗೆ ಅಕ್ರಮವಾಗಿ ಪ್ರವೇಶಿಸಿರುವ ಯುವಕನೊಬ್ಬ, ವಿದ್ಯಾರ್ಥಿನಿಯೊಬ್ಬಳ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆಗೈದ ಘಟನೆ ಸೋಮವಾರ ನಡೆದಿದೆ. ಆರೋಪಿ ತುಮಕೂರು ಮೂಲದ ಮಂಜುನಾಥ ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಕತ್ತರಿಯಿಂದ ಇರಿತಕ್ಕೊಳಗಾದ ವಿದ್ಯಾರ್ಥಿನಿಯೂ ತುಮಕೂರಿನವಳಾಗಿದ್ದು, ಇತ್ತೀಚೆಗೆ ಆರೋಪಿ ಮಂಜುನಾಥನ ಮೊಬೈಲ್ ಕರೆಗಳನ್ನು ನಿರ್ಲಕ್ಷಿಸುತ್ತಾ ಬಂದಿದ್ದಳು. ಇದರಿಂದ ಹತಾಶೆಗೊಂಡ ಆರೋಪಿ ವಿದ್ಯಾರ್ಥಿನಿಯನ್ನು ಹುಡುಕಿಕೊಂಡು ಬಂದಿದ್ದನು.

ಅದರಂತೆ, ಸೋಮವಾರ ಕಾಲೇಜಿಗೆ ಬಂದಿದ್ದ ಆತ, ತರಗತಿಯೊಳಗೆ ಪ್ರವೇಶಿಸಿ ಆಕೆಗೆ ಕತ್ತರಿಯಿಂದ ಚುಚ್ಚಿದ್ದಾನೆ. ಮೂಡುಬಿದಿರೆ ಠಾಣೆಯಲ್ಲಿ ಮಂಜುನಾಥನ ವಿರುದ್ಧ ಪ್ರಕರಣ ದಾಖಲಾಗಿದ್ದು, ಇನ್‌ಸ್ಪೆಕ್ಟ‌ರ್ ಸಂದೇಶ್‌ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಗುಲ್ಬರ್ಗಾ ವಿವಿ ಗೋಲ್ಡ್‌ ಮೆಡಲ್ ಪಡೆಯಲು ಘಟಿಕೋತ್ಸವಕ್ಕೆ ಬಂದಿದ್ದ ವಿದ್ಯಾರ್ಥಿನಿಗೆ ಶಾಕ್; ಅಷ್ಟಕ್ಕೂ ಅಲ್ಲಿ ಆಗಿದ್ದೇನು? ​ - Shock to the student

ABOUT THE AUTHOR

...view details