ಕರ್ನಾಟಕ

karnataka

ETV Bharat / snippets

ಕ್ಷುಲ್ಲಕ ಕಾರಣಕ್ಕೆ ಶುರುವಾದ ಅಣ್ಣ - ತಮ್ಮನ ಗಲಾಟೆ ಕೊಲೆಯಲ್ಲಿ ಅಂತ್ಯ!

MAN KILLED HIS BROTHER
ಸಾಂದರ್ಭಿಕ ಚಿತ್ರ (File)

By ETV Bharat Karnataka Team

Published : 17 hours ago

ಆನೇಕಲ್:ಕ್ಷುಲ್ಲಕ ಕಾರಣಕ್ಕೆ ಶುರುವಾದಅಣ್ಣ - ತಮ್ಮನ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ಆನೇಕಲ್ ಪೊಲೀಸ್ ಉಪವಿಭಾಗದ ಸರ್ಜಾಪುರ ಠಾಣಾ ವ್ಯಾಪ್ತಿಯ ಪಂಡಿತನ ಅಗ್ರಹಾರದಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಮೂಲದ ಆನಂದ್ (27) ಕೊಲೆಯಾದ ವ್ಯಕ್ತಿ. ಅಣ್ಣ ಮಣಿಕಂಠ ಕೊಲೆ ಆರೋಪಿ.

ಸುದ್ದಿ ತಿಳಿದು ಸ್ಥಳಕ್ಕೆ ಸರ್ಜಾಪುರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದರು. ಗಾರೆ ಕೆಲಸ ಮಾಡುತ್ತಿದ್ದ ಅಣ್ಣ- ತಮ್ಮ ತಿಂಗಳ ಹಿಂದೆ ಪಂಡಿತನ ಅಗ್ರಹಾರಕ್ಕೆ ಕೆಲಸಕ್ಕೆ ಬಂದು ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದಿದ್ದು, ಈ ವೇಳೆ ಮರದ ತುಂಡಿನಿಂದ ತಮ್ಮನ ತಲೆಗೆ ಮಣಿಕಂಠ ಹೊಡೆದಿದ್ದಾನೆ. ಪತಿಣಾಮ ತಲೆಯ ಹಿಂಭಾಗ ತೀವ್ರ ರಕ್ತಸ್ರಾವವಾಗಿ ಆನಂದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದು ಸರ್ಜಾಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೈಸೂರು: ವ್ಯಕ್ತಿಯ ಕತ್ತು ಕೊಯ್ದು ಕೊಲೆ; ವಾಮಾಚಾರದ ಶಂಕೆ

ABOUT THE AUTHOR

...view details