ಬಂಟ್ವಾಳ (ದಕ್ಷಿಣ ಕನ್ನಡ):ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಬಂಟ್ವಾಳದ ಪುಂಜಾಲಕಟ್ಟೆ ಮಾರ್ಗದ ಕೊಪ್ಪಳ ಎಂಬಲ್ಲಿ ಸೋಮವಾರ ಸಾಯಂಕಾಲ ಸಂಭವಿಸಿದೆ. ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿ ಮಗುಚಿ ಬಿದ್ದಿದೆ.
Published : 9 hours ago
ಬಂಟ್ವಾಳ ಬಳಿ ಕೆಎಸ್ಆರ್ಟಿಸಿ ಬಸ್ ಪಲ್ಟಿ: ಹಲವರಿಗೆ ಗಾಯ
ಕೆಎಸ್ಆರ್ಟಿಸಿ ಬಸ್ ಪಲ್ಟಿ (ETV Bharat)
ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಗಾಯಾಳುಗಳು ಹಾಗೂ ಬಸ್ನಲ್ಲಿ ಸಿಲುಕಿಕೊಂಡವರನ್ನು ರಕ್ಷಣೆ ಮಾಡಿದ್ದಾರೆ. ಗಾಯಾಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ.