ಕರ್ನಾಟಕ

karnataka

By ETV Bharat Karnataka Team

Published : 9 hours ago

ETV Bharat / snippets

ಬಂಟ್ವಾಳ ಬಳಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿ: ಹಲವರಿಗೆ ಗಾಯ

ksrtc bus
ಕೆಎಸ್​ಆರ್​ಟಿಸಿ ಬಸ್ ಪಲ್ಟಿ (ETV Bharat)

ಬಂಟ್ವಾಳ (ದಕ್ಷಿಣ ಕನ್ನಡ):ಕೆಎಸ್​​ಆರ್​ಟಿಸಿ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಬಂಟ್ವಾಳದ ಪುಂಜಾಲಕಟ್ಟೆ ಮಾರ್ಗದ ಕೊಪ್ಪಳ ಎಂಬಲ್ಲಿ ಸೋಮವಾರ ಸಾಯಂಕಾಲ ಸಂಭವಿಸಿದೆ. ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿ ಮಗುಚಿ ಬಿದ್ದಿದೆ.

ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಗಾಯಾಳುಗಳು ಹಾಗೂ ಬಸ್​​ನಲ್ಲಿ ಸಿಲುಕಿಕೊಂಡವರನ್ನು ರಕ್ಷಣೆ ಮಾಡಿದ್ದಾರೆ. ಗಾಯಾಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ:'ಸಂತೆಕಟ್ಟೆಯ ಹೊಂಡ ಬಾವೆ ಕೆತ್ತಿದ ಬೊಂಡ': ರಸ್ತೆ ಅವ್ಯವಸ್ಥೆಗೆ ಕನ್ನಡಿ ಹಿಡಿದ ತುಳು ಹಾಡು - ಸಖತ್​ ವೈರಲ್​ - Udupi Santhekatte song

ABOUT THE AUTHOR

...view details