ಕರ್ನಾಟಕ

karnataka

ETV Bharat / snippets

ರಾಯಚೂರು: ಬಟ್ಟೆ ತೊಳೆಯಲು ಹೋದ ತಾಯಿ - ಮಗಳು ನೀರುಪಾಲು

By ETV Bharat Karnataka Team

Published : Oct 13, 2024, 9:23 PM IST

ಬಟ್ಟೆ ತೊಳೆಯಲು ಹೋದ ತಾಯಿ, ಮಗಳು ನೀರುಪಾಲು
ಬಟ್ಟೆ ತೊಳೆಯಲು ಹೋದ ತಾಯಿ, ಮಗಳು ನೀರುಪಾಲು (ETV Bharat)

ರಾಯಚೂರು:ತುಂಗಭದ್ರಾ ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ, ಮಗಳು ಕಾಲು ಜಾರಿ ಬಿದ್ದು ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಬಿ.ಯದ್ಲಾಪೂರ ಗ್ರಾಮದಲ್ಲಿ ಭಾನುವಾರ ನಡೆದಿದೆ. ತಾಯಿ ಸುಜಾತಾ (27) ಮೃತದೇಹ ಸಿಕ್ಕಿದ್ದು, 10 ವರ್ಷದ ಬಾಲಕಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಕಾಲುವೆಯಲ್ಲಿ ಕಾಲು ಜಾರಿ ಬಿದ್ದ ಮಗಳನ್ನು ಕಾಪಾಡಲು ಹೋಗಿ ತಾಯಿಯೂ ಕೊಚ್ಚಿ ಹೋಗಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮೃತರ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ತುಂಗಾಮೇಲ್ದಂಡೆ ಕಾಲುವೆ ಒಡೆದು ಅಪಾರ ಪ್ರಮಾಣದ ಬೆಳೆ ಹಾನಿ; ಹಾವೇರಿ ರೈತರ ಕಣ್ಣೀರು

ABOUT THE AUTHOR

...view details