ಕರ್ನಾಟಕ

karnataka

ಕೌಟುಂಬಿಕ ಕಲಹ: ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ರಕ್ಷಿಸಿದ ಜನರು

By ETV Bharat Karnataka Team

Published : Sep 16, 2024, 6:18 PM IST

people saved woman
ಕೊಳ್ಳೇಗಾಲ ಪಟ್ಟಣ ಪೊಲೀಸ್​ ಠಾಣೆ (ETV Bharat)

ಚಾಮರಾಜನಗರ:ಕೌಟುಂಬಿಕ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಮಹಿಳೆಯನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಸಮೀಪ ತಡರಾತ್ರಿ ನಡೆದಿದೆ‌.

ಕೊಳ್ಳೇಗಾಲ ನಿವಾಸಿಯಾದ ಮಹಿಳೆಗೆ ಪತಿ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ. ಕೌಟುಂಬಿಕ ಕಲಹ ತಾಳಲಾರದೇ ಆತ್ಮಹತ್ಯೆಗೆ ಮುಂದಾಗಿದ್ದಳು ಎನ್ನಲಾಗಿದೆ. ಮಹಿಳೆಯನ್ನು ಕಂಡ ಸ್ಥಳೀಯರು, ರಕ್ಷಣೆ ಮಾಡಿದ್ದಾರೆ. ನಂತರ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ಕರೆತಂದು ದಾಖಲು ಮಾಡಿದ್ದಾರೆ. ಪೊಲೀಸರು ಮಹಿಳೆಯ ಹೇಳಿಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

ಪತಿಯು ಮಾನಸಿಕ ಹಿಂಸೆ ಹಾಗೂ ದೈಹಿಕ ಹಲ್ಲೆ ಮಾಡುತ್ತಿದ್ದ. ಅಲ್ಲದೇ, ಆತ ದೌರ್ಜನ್ಯ ಪ್ರಕರಣದ ಆರೋಪಿಯೂ ಆಗಿದ್ದಾನೆ. ಹಿಂಸೆ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಮಹಿಳೆ ಆರೋಪಿಸಿದ್ದಾರೆ. ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:ಫ್ಲೈಓವರ್‌ ರಾಡ್ ಬಿದ್ದು ಎಎಸ್​​ಐ ಸಾವು ಪ್ರಕರಣ: ಹುಬ್ಬಳ್ಳಿಯಲ್ಲಿ 11 ಜನ ಪೊಲೀಸ್ ವಶಕ್ಕೆ - ASI DEATH CASE

ABOUT THE AUTHOR

...view details