ಕರ್ನಾಟಕ

karnataka

By ETV Bharat Karnataka Team

Published : Sep 6, 2024, 10:33 PM IST

ETV Bharat / snippets

ಮೈಸೂರು: ಮಚ್ಚಿನಿಂದ ವ್ಯಕ್ತಿಯ ಕೊಲೆ ಮಾಡಿ ಆರೋಪಿ ಪರಾರಿ

Etv Bharat
ಕೊಲೆ ನಡೆದ ಸ್ಥಳ (murder)

ಮೈಸೂರು:ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ಆರೋಪಿ ಪರಾರಿಯಾದ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ರಂಗಸ್ವಾಮಿ (42) ಕೊಲೆಯಾದ ವ್ಯಕ್ತಿ. ಮಹದೇವ ಶೆಟ್ಟಿ (45) ಪರಾರಿಯಾದ ಆರೋಪಿಯಾಗಿದ್ದಾನೆ. ತನ್ನ ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಮೇಲೆ ಮಹದೇವ ಹಲವು ದಿನಗಳಿಂದ ರಂಗಸ್ವಾಮಿ ಜೊತೆ ಗಲಾಟೆ ಮಾಡುತ್ತಿದ್ದ. ಇಂದು ಗೌರಿ ಹಬ್ಬದ ಹಿನ್ನೆಲೆಯಲ್ಲಿ ರಂಗಸ್ವಾಮಿ ಗ್ರಾಮದ ಬೇಕರಿಯ ಬಳಿ ಕುಳಿತ ವೇಳೆ ಇಬ್ಬರ ನಡುವೆ ಜಗಳವಾಗಿದೆ. ತಕ್ಷಣ ಮಚ್ಚಿನಿಂದ ಮಹದೇವ ಶೆಟ್ಟಿ ರಂಗಸ್ವಾಮಿ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಹಲ್ಲೆಗೊಳಗಾದ ರಂಗಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಮಾಹಿತಿ ತಿಳಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಷ್ಣುವರ್ಧನ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ.

ABOUT THE AUTHOR

...view details