ರಾಯಚೂರು:ಲೋ ಬಿಪಿಯಿಂದವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ವಿದ್ಯಾವಾಹಿನಿ ಶಾಲೆಯ 8ನೇ ತರಗತಿಯಲ್ಲಿ ಓದುತ್ತಿದ್ದ ತರುಣ್ ಕುಮಾರ (14) ಮೃತ ವಿದ್ಯಾರ್ಥಿ.
ವಿದ್ಯಾರ್ಥಿ ಎಂದಿನಂತೆ ಶಾಲೆಗೆ ಆಗಮಿಸಿ ತರಗತಿಯಲ್ಲಿ ಕುಳಿತಿದ್ದ. ಈ ವೇಳೆ ತನಗೆ ಕಣ್ಣು ಮಂಜಾಗುತ್ತಿದೆ ಎಂದು ಹೇಳಿ ತನ್ನ ಮುಂದಿನ ಬೆಂಚ್ನಲ್ಲಿ ಕುಳಿತುಕೊಳ್ಳಲು ಪ್ರಯತ್ನಿಸಿದಾಗ ದಿಢೀರ್ ಕುಸಿದು ಬಿದ್ದಿದ್ದಾನೆ. ಕೂಡಲೇ ಶಾಲಾ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಅಷ್ಟೊತ್ತಿಗೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ.