ಮಂಡ್ಯ:ಕಾರು ಮತ್ತು ಲಾರಿ ನಡುವಿನ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗಮಂಗಲ ಹಾಗೂ ಪಾಂಡವಪುರ ಹೆದ್ದಾರಿಯ ಶ್ರೀ ರಾಮನಹಳ್ಳಿ ಬಳಿ ಇಂದು ನಡೆದಿದೆ.
ಚಿತ್ರದುರ್ಗದ ಯುವರಾಜ್, ತಿಪ್ಪೇಸ್ವಾಮಿ ಹಾಗೂ ಸಿದ್ದೇಶ್ ಮೃತರು. ಇವರಿದ್ದ ಕಾರಿಗೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ಕಾರು ರಸ್ತೆಯಿಂದ ಪಕ್ಕಕ್ಕೆ ಸರಿದು, ಕಂಬಕ್ಕೆ ಗುದ್ದಿದೆ. ಕಾರಿನ ಎಡಭಾಗ ಸಂಪೂರ್ಣ ಛಿದ್ರಗೊಂಡಿದೆ. ಮೃತದೇಹಗಳನ್ನು ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.