ಚಾಮರಾಜನಗರ: ಜೋತುಬಿದ್ದ ವಿದ್ಯುತ್ ಲೇನ್ನಿಂದಾಗಿ ಜಮೀನಿಗೆ ತೆರಳುತ್ತಿದ್ದ ರೈತರು ದಾರುಣವಾಗಿ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಚಾಮರಾಜನಗರ ತಾಲೂಕಿನ ಅಯ್ಯನಪುರ ಗ್ರಾಮದ ನಾಗೇಂದ್ರ (45), ಮಲ್ಲೇಶ (48) ಮೃತ ರೈತರು.
ಜೋತು ಬಿದ್ದ ವಿದ್ಯುತ್ ಲೇನ್ ತಾಗಿ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ರೈತರು ಸಾವು
Published : 5 hours ago
ಬುಧವಾರ ರಾತ್ರಿ ತಮ್ಮ ಜಮೀನಿಗೆ ಅಯ್ಯನಪುರ ಗ್ರಾಮದ ಅಯ್ಯನಪುರ - ಇತ್ತಲಗುಡ್ಡೆ ಮಾರ್ಗದ ರಸ್ತೆಯಲ್ಲಿ ಬೈಕ್ನಲ್ಲಿ ತೆರಳುವಾಗ ಜೋತು ಬಿದ್ದಿದ್ದ ವಿದ್ಯುತ್ ಲೇನ್ ಕುತ್ತಿಗೆಗೆ ಬಿಗಿದು ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ. ಬೆಳಗ್ಗೆ ಆದರೂ ಮನೆಗೆ ರೈತರು ವಾಪಸ್ ಬರದ ಕಾರಣ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಗ್ರಾಮಸ್ಥರು ಹಾಗೂ ಸ್ಥಳೀಯ ರೈತರು ಸೆಸ್ಕ್ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ:ಬೆಂಗಳೂರು: ಲಿಫ್ಟ್ ಅಳವಡಿಸಲು ತೆಗೆದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು