ಕರ್ನಾಟಕ

karnataka

ಬೈಕ್​ಗೆ ಲಾರಿ ಡಿಕ್ಕಿ: ಗೆಳೆಯನ ಹುಟ್ಟುಹಬ್ಬಕ್ಕೆ ಬರುತ್ತಿದ್ದ ಇಬ್ಬರು ಸಾವು

By ETV Bharat Karnataka Team

Published : Aug 1, 2024, 10:32 PM IST

accident
ಮೃತ ಯುವಕರು (ETV Bharat)

ಚಿಕ್ಕಬಳ್ಳಾಪುರ:ಬೈಕ್​ಗೆ ಲಾರಿ ಡಿಕ್ಕಿ ಹೊಡೆದು, ಗೆಳೆಯನ ಹುಟ್ಟುಹಬ್ಬ ಆಚರಿಸಲು ಬರುತ್ತಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚಿಂತಾಮಣಿ‌ ತಾಲೂಕಿನ ಸಂತೇಕಲ್ಲಹಳ್ಳಿ ಗೇಟ್ ಸಂಭವಿಸಿದೆ.

ಚಿಂತಾಮಣಿ‌ಯ ಕನಿಶೆಟ್ಟಿಹಳ್ಳಿ ಗ್ರಾಮದ ಭವನ್ ಕುಮಾರ್ (27) ಹಾಗೂ ಭಾನುಪ್ರಕಾಶ್ (23) ಮೃತ ಯುವಕರು. ಭವನ್ ಕುಮಾರ್ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೆಲಸ ಮಾಡುತ್ತಿದ್ದರೆ, ಭಾನುಪ್ರಕಾಶ್ ಚೊಕ್ಕಹಳ್ಳಿ ಗೇಟ್​​ನ ಫ್ಯಾಕ್ಟರಿಯೊಂದರಲ್ಲಿ ಕೆಲಸದಲ್ಲಿದ್ದ.

ಕನಿಶೆಟ್ಟಿಹಳ್ಳಿ ಗ್ರಾಮದಲ್ಲಿ ಸ್ನೇಹಿತನ ಹುಟ್ಟುಹಬ್ಬ ಸಮಾರಂಭಕ್ಕೆ ಇಬ್ಬರೂ ಒಟ್ಟಿಗೆ ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನಿಂದ ಬರುತ್ತಿದ್ದರು. ಸಂತೇಕಲ್ಲಹಳ್ಳಿ ಗೇಟ್ ಸಮೀಪದಲ್ಲಿ ಚಿಂತಾಮಣಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.

ಡಿವೈಎಸ್​​ಪಿ ಮುರಳೀಧರ್, ಗ್ರಾಮಾಂತರ ಠಾಣೆ ಇನ್ಸ್​ಪೆಕ್ಟರ್​​ ಶಿವರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ABOUT THE AUTHOR

...view details