ಕರ್ನಾಟಕ

karnataka

ETV Bharat / snippets

ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

By ETV Bharat Karnataka Team

Published : Jul 8, 2024, 2:09 PM IST

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)

ಬೆಂಗಳೂರು: ಕೌಟುಂಬಿಕ ಕಾರಣದಿಂದಾಗಿ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮದರ್ ತೆರೆಸಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದಿಯಾ ಮಂಡೋಲ್ ಆತ್ಮಹತ್ಯೆಗೆ ಶರಣಾದ ಯುವತಿ.

ಪಶ್ಚಿಮ ಬಂಗಾಳ ಮೂಲದ ದಿಯಾ ನಗರದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿನ ಹಾಸ್ಟೆಲ್​ನಲ್ಲಿ ನೆಲೆಸಿದ್ದಳು. ಇತ್ತೀಚೆಗೆ ಕೌಟುಂಬಿಕ ಕಲಹದಿಂದ ಬೇಸತ್ತಿದ್ದಳು. ಕಳೆದ ಮೂರು ದಿನಗಳ ಹಿಂದೆ ಹಾಸ್ಟೆಲ್ ಕೊಠಡಿಯೊಂದರಲ್ಲಿ ನೇಣುಬಿಗಿದು ಆತ್ಮಹತ್ಯೆ ಶರಣಾಗಿದ್ದಾಳೆ. ಘಟನೆ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಪೋಷಕರಿಗೆ ಒಪ್ಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಒಂದಾಗಿ ಬಾಳಲು ಸಾಧ್ಯವಿಲ್ಲವೆಂಬ ಬೇಸರ: ಬೆಂಗಳೂರಲ್ಲಿ ವಿವಾಹಿತನೊಂದಿಗೆ ಯುವತಿ ಆತ್ಮಹತ್ಯೆ - lovers committed suicide

ABOUT THE AUTHOR

...view details